Friday, September 24, 2010

ಹಾಲಲ್ಲಾದರೂ ಹಾಕು ನೀರಲ್ಲಾದರೂ



ಚಿತ್ರ : ದೇವತಾ ಮನುಷ್ಯ
ಸಾಹಿತ್ಯ : ಚಿ.ಉದಯ್ ಶಂಕರ್
ಸಂಗೀತ : ಉಪೇಂದ್ರ ಕುಮಾರ್
ಗಾಯಕರು : ಡಾ|| ರಾಜ್ ಕುಮಾರ್ ಹಾಗೂ ಬಿ. ಆರ್. ಛಾಯಾ
ವರ್ಷ : ೧೯೮೮

ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.
ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.
ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.

ಮುಳ್ಳಲ್ಲಾದರೂ ನೂಕು, ಕಲ್ಲಲ್ಲಾದರೂ ನೂಕು, ರಾಘವೇಂದ್ರ.
ಮುಳ್ಳಲ್ಲಾದರೂ ನೂಕು, ಕಲ್ಲಲ್ಲಾದರೂ ನೂಕು, ರಾಘವೇಂದ್ರ.
ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ, ಒಂದಾಗಿರುವೆ ರಾಘವೇಂದ್ರ.
ಬಿಸಿಲಲ್ಲೇ ಒಣಗಿಸು, ನೆರಳಲ್ಲೇ ಮಲಗಿಸು, ರಾಘವೇಂದ್ರ.
ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ, ನಗುನಗುತಾಲಿರುವೆ ರಾಘವೇಂದ್ರ.

ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.

ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು, ರಾಘವೇಂದ್ರ
ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು, ರಾಘವೇಂದ್ರ
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು, ನೀನೇ ಹೇಳು, ರಾಘವೇಂದ್ರ.
ಎಲ್ಲಿದ್ದಾರೇನು ನಾ, ಹೇಗಿದ್ದರೇನು ನಾ, ರಾಘವೇಂದ್ರ.
ನಿನ್ನಲ್ಲಿ ಶರಣಾಗಿ, ನೀ ನನ್ನ ಉಸಿರಾಗಿ, ಬಾಳಿದರೆ ಸಾಕು ರಾಘವೇಂದ್ರ.

No comments: