ಚಿತ್ರ: ದೇವರಗುಡಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೭೫
ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ
ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ
ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ
ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ
ಸುಖಸಂಸಾರಕೆ ಎಂದೂ ಸತಿಯೇ ಕಾರಣ
ಬಾನಿಗೆ ಎಂದೆಂದಿಗೂ ಆ ರವಿಯೇ ಭೂಷಣ
ಬಳುಕುವಾ ಲತೆಗೆ ಹೆಣ್ಣಿನಾ ಮುಡಿಗೆ ಹೂವೇ ಭೂಷಣ
ರಜನಿಗೆ ಎಂದೆಂದಿಗೂ ಆ ಶಶಿಯೇ ಭೂಷಣ
ಅರಳಿದಾ ಮನಕೆ ಹವಳದಾ ತುಟಿಗೆ ನಗುವೇ ಭೂಷಣ
ನೋವಿಗೆ...ನಲಿವಿಗೆ...
ನೋವಿಗೆ...ನಲಿವಿಗೆ....ಹೆಣ್ಣೇ ಕಾರಣ....
ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ
ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ
ಸುಖಸಂಸಾರಕೆ ಎಂದೂ ಸತಿಯೇ ಕಾರಣ
ಮದುವೆಯ ಅನುಬಂಧವು ಎಂದೂ ಅಳಿಯದು
ಕೋಪದಾ ಕಿಡಿಗೆ ರೋಷದಾ ಉರಿಗೆ ಒಲವು ಬಾಡದು
ದೇಹವು ದೂರಾದರೂ ಮನಸೂ ಮರೆಯದು
ಬೆರೆತಿಹಾ ಜೀವ ವಿರಹದಾ ನೋವ ಎಂದೂ ಸಹಿಸದು
ಒಲವಿನ... ಜೀವನ...
ಒಲವಿನ... ಜೀವನ...ಸುಖಕೆ ಸಾಧನ
ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ
ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ
ಸುಖಸಂಸಾರಕೆ ಎಂದೂ ಸತಿಯೇ ಕಾರಣ
No comments:
Post a Comment