Wednesday, March 9, 2011

ನನ್ನೆದೆ ವೀಣೆಯು ಮಿಡಿಯುವುದು



ಚಿತ್ರ: ಕಥಾನಾಯಕ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಎಂ. ರಂಗರಾವ್
ಗಾಯಕರು : ಎಸ್.ಪಿ.ಬಾಲಸುಬ್ರಹ್ಮಣ್ಯಂ,. ವಾಣಿ ಜಯರಾಂ
ವರ್ಷ: ೧೯೮೬

ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು.....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು...
ನಿನ್ನ ನೋಡಿದಾಗ..ಕಣ್ಣು ಕೂಡಿದಾಗ ಅನುರಾಗ ಮೂಡಿದಾಗ....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು

ಎಂದೂ ಕಾಣೆ ನಂಬು ಜಾಣೆ ನಿನ್ನಾ ಸೇರಲು
ನೂರೂ ಮಾತು ನೂರೂ ಕವಿತೆ ಕಣ್ಣೇ ಆಡಲು
ನಿನ್ನಾ ನೋಟ ನಿನ್ನಾ ಆಟ ನನ್ನಾ ಸೆಳೆಯಲು
ಒಂಟಿ ಬಾಳು ಸಾಕು ಎಂದು ಮನಸೂ ಹೇಳಲು
ಆಸೆ ಕೆಣಕಿದಾಗ ತೋಳಿಂದಾ ಬಳಸಿದಾಗ
ಆಸೆ ಕೆಣಕಿದಾಗ ತೋಳಿಂದಾ ಬಳಸಿದಾಗ
ಮಿಂಚಿನ ಬಳ್ಳಿಯು ಒಡಲಲಿ ಓಡುತ ನಾಚಿ ನೋಡಿದಾಗ

ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು...
ನಿನ್ನ ನೋಡಿದಾಗ..ಕಣ್ಣು ಕೂಡಿದಾಗ ಅನುರಾಗ ಮೂಡಿದಾಗ....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು

ಮೇಲೆ ಸೂರ್ಯ ಜಾರಿ ಜಾರಿ ಬಿಸಿಲು ಕರಗಲು
ಸಂಜೆ ಬಂದು ರಂಗು ತಂದು ಮೇಲೆ ಎರಚಲು
ತಂಪು ಗಾಳಿ ಬೀಸಿ ಬಳ್ಳಿ ಬಳುಕಿ ಆಡಲು
ಹಾಗೇ ಹೀಗೆ ಆಡಿ ಹೂವು ಕಂಪು ಚೆಲ್ಲಲೂ
ದುಂಬಿ ನೋಡಿದಾಗ ಸಂಗೀತ ಹಾಡಿದಾಗ
ದುಂಬಿ ನೋಡಿದಾಗ ಸಂಗೀತ ಹಾಡಿದಾಗ
ಮನಸಿನ ಹಕ್ಕಿಯು ಕನಸನು ಕಾಣುತ ದೂರ ಹಾರಿದಾಗ

ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು...
ನಿನ್ನ ನೋಡಿದಾಗ..ಕಣ್ಣು ಕೂಡಿದಾಗ ಅನುರಾಗ ಮೂಡಿದಾಗ....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು

No comments: