ಚಿತ್ರ: ಮಯೂರ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಡಾ|| ರಾಜ್ಕುಮಾರ್, ಎಸ್. ಜಾನಕಿ
ವರ್ಷ: ೧೯೭೫
ಈ ಮೌನವಾ ತಾಳೆನು
ಈ ಮೌನವಾ ತಾಳೆನು ಮಾತಾಡೆ ದಾರಿಯ ಕಾಣೆನು
ಓ ರಾಜಾ..ಈ ಮೌನವಾ ತಾಳೆನು
ನೀ ಹೇಳದೇ ಬಲ್ಲೆನು ನಿನ್ನಾಸೆ ಕಣ್ಣಲ್ಲೇ ಕಂಡೆನು
ಓ ರಾಣಿ...ನೀ ಹೇಳದೇ ಬಲ್ಲೆನು
ನಾನಂದು ನಿನ್ನ ಕಂಡಾಗ ಚಿನ್ನ ಏನೇನೋ ಹೊಸ ಭಾವನೆ
ಹೂವಾಗಿ ಮನಸು ಏನೇನೋ ಕನಸು ನಾ ಕಾಣದ ಕಲ್ಪನೆ
ಇನ್ನು ನಿನ್ನ ಬಿಡೆನು ಈ ದೂರ ಸಹಿಸೆನು
ನೀ ಹೇಳದೇ ಬಲ್ಲೆನು ನಿನ್ನಾಸೆ ಕಣ್ಣಲ್ಲೇ ಕಂಡೆನು
ಓ ರಾಣಿ...ನೀ ಹೇಳದೇ ಬಲ್ಲೆನು
ಈ ಅಂದ ಕಂಡು ನಾ ಮೋಹಗೊಂಡು ಮನ ಹಿಗ್ಗಿ ಹೂವಾಯಿತು
ಬಾನಲ್ಲಿ ಮುಗಿಲು ಕಂಡಾಗ ನವಿಲು ಕುಣಿವಂತೆ ನನಗಾಯಿತು
ಈ ಅಂದ ಕಂಡು ನಾ ಮೋಹಗೊಂಡು ಮನ ಹಿಗ್ಗಿ ಹೂವಾಯಿತು
ಬಾನಲ್ಲಿ ಮುಗಿಲು ಕಂಡಾಗ ನವಿಲು ಕುಣಿವಂತೆ ನನಗಾಯಿತು
ಅಂದೇ ನಿನಗೆ ಸೋತೆ ನಾ ಜಗವನೆ ಮರೆತೆ
ಈ ಮೌನವಾ ತಾಳೆನು ಮಾತಾಡೆ ದಾರಿಯ ಕಾಣೆನು
ಓ ರಾಜಾ..ಓ ರಾಣಿ...ಓ ರಾಜಾ..ಓ ರಾಣಿ.
No comments:
Post a Comment