Thursday, June 2, 2011

ಈ ಗುಲಾಬಿಯು ನಿನಗಾಗಿ

ಚಿತ್ರ: ಮುಳ್ಳಿನ ಗುಲಾಬಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨

ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ

ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ಆತುರ ತರುವ ವೇದನೆ ಏನು
ಆತುರ ತರುವ ವೇದನೆ ಏನು ಜೀವದ ಜೀವವು ಪ್ರಿಯತಮೆ ನೀನು

ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ

ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ಕಾಣದೆ ಹೋದರೆ ಅರೆಕ್ಷಣ ನಿನ್ನ
ಕಾಣದೆ ಹೋದರೆ ಅರೆಕ್ಷಣ ನಿನ್ನ ಮರುಕ್ಷಣ ಪ್ರಿಯತಮೆ ನನ್ನ ಸಾವು

ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ

No comments: