Thursday, June 2, 2011

ಭಾವವೆಂಬ ಹೂವು ಅರಳಿ

ಚಿತ್ರ: ಉಪಾಸನೆ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ವಿಜಯಭಾಸ್ಕರ್
ಗಾಯನ : ವಾಣಿ ಜಯರಾಂ
ವರ್ಷ: ೧೯೭೪

ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ
ರಾಗವೆಂಬ ಜೇನ ಹೊನಲು ತುಂಬಿ ಹರಿಯಲಿ
ಜಗವಾ ಕುಣಿಸಿ ತಣಿಸಲಿ
ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ

ಸ.ಗ.ಮ.ದ.ಗಾ.ಮಾ.ದ ಸ.ಮ.ದ.ನಿ.ಸಾ.ದ.ನಿ

ಗಾನಕೆ ನಲಿಯದ ಮನಸೇ ಇಲ್ಲ ಗಾನಕೆ ಮಣಿಯದ ಜೀವವೆ ಇಲ್ಲ
ಗಾನಕೆ ನಲಿಯದ ಮನಸೇ ಇಲ್ಲ ಗಾನಕೆ ಮಣಿಯದ ಜೀವವೆ ಇಲ್ಲ
ಗಾನಕೆ ಒಲಿಯದ ದೇವರೆ ಇಲ್ಲ ಗಾನವೆ ತುಂಬಿದೆ ಈ ಜಗವೆಲ್ಲಾ

ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ

ದಾಸರು ಹರಿಯ ಸ್ಮರಣೆಯ ಮಾಡಿ ದರುಶನ ಪಡೆದರು ಅನುದಿನ ಪಾಡಿ
ದಾಸರು ಹರಿಯ ಸ್ಮರಣೆಯ ಮಾಡಿ ದರುಶನ ಪಡೆದರು ಅನುದಿನ ಪಾಡಿ
ಶರಣರು ಹರನ ನೆನೆಯುತ ಬೇಡಿ ಶಿವನಾ ಕಂಡರು ವಚನವ ಹಾಡಿ

ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ

ವಿಶ್ವವೆ ಅರಳಿತು ಓಂಕಾರದಲಿ ವಾಣಿಯ ವೀಣೆಯ ಝೆಂಕಾರದಲಿ
ವಿಶ್ವವೆ ಅರಳಿತು ಓಂಕಾರದಲಿ ವಾಣಿಯ ವೀಣೆಯ ಝೆಂಕಾರದಲಿ
ಕುಣಿಯಿತು ನಾರದನ ಗಾನದಲ್ಲಿ ತಣಿಯಿತು ಕೃಷ್ಣನ ಮುರಳಿಯಲಿ

ಭಾವವೆಂಬ ಹೂವು ಅರಳಿ ಗಾನವೆಂಬ ಗಂಧ ಚೆಲ್ಲಿ
ರಾಗವೆಂಬ ಜೇನ ಹೊನಲು ತುಂಬಿ ಹರಿಯಲಿ
ಜಗವಾ ಕುಣಿಸಿ ತಣಿಸಲಿ

No comments: