Showing posts with label ಅಪೂರ್ವ ಸಂಗಮ. Show all posts
Showing posts with label ಅಪೂರ್ವ ಸಂಗಮ. Show all posts

Monday, June 6, 2011

ಅರಳಿದೆ ತನು ಮನ ನೋಡುತ ನಿನ್ನ



ಚಿತ್ರ: ಅಪೂರ್ವ ಸಂಗಮ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಡಾ|| ರಾಜ್ ಕುಮಾರ್, ಎಸ್.ಜಾನಕಿ
ವರ್ಷ: ೧೯೮೪

ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ

ಚಲಿಸುವ ತಂಗಾಳಿಯು ಚೆಲುವೆ ನಿನ್ನ ನೋಡಿ
ನಲಿಯುತ ಓಡಿದೆ ಮುಂಗುರುಳ ಹಿಡಿದು ಆಡಿ
ಅರಳಿದ ಗುಲಾಬಿಯು ಸೋಕಿ ಪರಿಮಳ ಹೀರಿ
ಸರಸಕೆ ಬಂದಿದೆ ಈ ನಿನ್ನ ಅಂದ ನೋಡಿ
ಸುಖ ತರುತಿದೆ ಹಿತ ಕರೆದಿದೆ ಚಲುವ
ಅರಳಿದೆ ತನು ಮನ ನೋಡುತ ನಿನ್ನ

ಎದೆಯಲಿ ಹೊಮ್ಮಿ ಹೊಮ್ಮಿ ನೂರು ಬಯಕೆ ಈಗ
ಕೆಣಕಲು ಸೋತೆನು ನನ್ನಿನಿಯ ನಿನ್ನ ನೋಡಿ
ಪ್ರಣಯದ ಸಂಗೀತದ ಇಂಪು ಕಿವಿಯ ತುಂಬಿ
ಕನಸನು ಕಂಡೆನು ಸಂಗಾತಿಯೇ ನಿನ್ನ ಸೇರಿ
ಇನ್ನು ಬಿಡುವೆನೇ ನನ್ನೇ ಕೊಡುವೆ ನಾ ಚೆಲುವೆ

ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ