Showing posts with label ಉಪೇಂದ್ರ ಕುಮಾರ್. Show all posts
Showing posts with label ಉಪೇಂದ್ರ ಕುಮಾರ್. Show all posts
Monday, June 6, 2011
ಅರಳಿದೆ ತನು ಮನ ನೋಡುತ ನಿನ್ನ
ಚಿತ್ರ: ಅಪೂರ್ವ ಸಂಗಮ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಡಾ|| ರಾಜ್ ಕುಮಾರ್, ಎಸ್.ಜಾನಕಿ
ವರ್ಷ: ೧೯೮೪
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ
ಚಲಿಸುವ ತಂಗಾಳಿಯು ಚೆಲುವೆ ನಿನ್ನ ನೋಡಿ
ನಲಿಯುತ ಓಡಿದೆ ಮುಂಗುರುಳ ಹಿಡಿದು ಆಡಿ
ಅರಳಿದ ಗುಲಾಬಿಯು ಸೋಕಿ ಪರಿಮಳ ಹೀರಿ
ಸರಸಕೆ ಬಂದಿದೆ ಈ ನಿನ್ನ ಅಂದ ನೋಡಿ
ಸುಖ ತರುತಿದೆ ಹಿತ ಕರೆದಿದೆ ಚಲುವ
ಅರಳಿದೆ ತನು ಮನ ನೋಡುತ ನಿನ್ನ
ಎದೆಯಲಿ ಹೊಮ್ಮಿ ಹೊಮ್ಮಿ ನೂರು ಬಯಕೆ ಈಗ
ಕೆಣಕಲು ಸೋತೆನು ನನ್ನಿನಿಯ ನಿನ್ನ ನೋಡಿ
ಪ್ರಣಯದ ಸಂಗೀತದ ಇಂಪು ಕಿವಿಯ ತುಂಬಿ
ಕನಸನು ಕಂಡೆನು ಸಂಗಾತಿಯೇ ನಿನ್ನ ಸೇರಿ
ಇನ್ನು ಬಿಡುವೆನೇ ನನ್ನೇ ಕೊಡುವೆ ನಾ ಚೆಲುವೆ
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
Labels:
೧೯೮೪,
ಅಪೂರ್ವ ಸಂಗಮ,
ಉಪೇಂದ್ರ ಕುಮಾರ್,
ಎಸ್. ಜಾನಕಿ,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್
Thursday, June 2, 2011
ಜೊತೆಯಾಗಿ ಹಿತವಾಗಿ
ಚಿತ್ರ: ರಥಸಪ್ತಮಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೬
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ...
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ....
ಆ ಬಾನ ನೆರಳಲ್ಲಿ ಆ ಸೂರ್ಯನೆದುರಲ್ಲಿ
ಒಲವಿಂದ ನಾವೀಗ ಈ ಗಂಗೆ ದಡದಲ್ಲಿ
ಒಂದಾಗಿ ಸವಿಯಾದ ಮಾತೊಂದ ನುಡಿವ
ಈ ಸಂಜೆ ರಂಗಲ್ಲಿ ಈ ತಂಪು ಗಾಳೀಲಿ
ಜೊತೆಯಾಗಿ ನಾವೀಗ ಶಂಕರನ ಎದುರಲ್ಲಿ
ಇಂಪಾಗಿ ಹಿತವಾದ ಮಾತೊಂದ ನುಡಿವಾ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಕನಸಲ್ಲಿ ಕಂಡಾಸೆ ಮನಸಲ್ಲಿ ಇರುವಾಸೆ
ಎಲ್ಲವೂ ಒಂದೇನೇ ನಿನ್ನನ್ನು ಪಡೆವಾಸೆ
ಇನ್ನೇನು ಬೇಕಿಲ್ಲ ನನ್ನಾಣೆ ನಲ್ಲ
ಹಗಲಲ್ಲಿ ಕಂಡಾಸೆ ಇರುಳಲ್ಲಿ ಬಂದಾಸೆ
ಎಲ್ಲಾವೂ ಒಂದೇನೆ ನಿನ್ನೊಡನೆ ಇರುವಾಸೆ
ಬೇರೇನು ನಾ ಕೇಳೆ ನನ್ನಾಣೆ ನಲ್ಲೆ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ನಿನ್ನ ಬಿಡಲಾರೆ ನಾನೆಂದಿಗೂ
ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೬
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ...
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ....
ಆ ಬಾನ ನೆರಳಲ್ಲಿ ಆ ಸೂರ್ಯನೆದುರಲ್ಲಿ
ಒಲವಿಂದ ನಾವೀಗ ಈ ಗಂಗೆ ದಡದಲ್ಲಿ
ಒಂದಾಗಿ ಸವಿಯಾದ ಮಾತೊಂದ ನುಡಿವ
ಈ ಸಂಜೆ ರಂಗಲ್ಲಿ ಈ ತಂಪು ಗಾಳೀಲಿ
ಜೊತೆಯಾಗಿ ನಾವೀಗ ಶಂಕರನ ಎದುರಲ್ಲಿ
ಇಂಪಾಗಿ ಹಿತವಾದ ಮಾತೊಂದ ನುಡಿವಾ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಕನಸಲ್ಲಿ ಕಂಡಾಸೆ ಮನಸಲ್ಲಿ ಇರುವಾಸೆ
ಎಲ್ಲವೂ ಒಂದೇನೇ ನಿನ್ನನ್ನು ಪಡೆವಾಸೆ
ಇನ್ನೇನು ಬೇಕಿಲ್ಲ ನನ್ನಾಣೆ ನಲ್ಲ
ಹಗಲಲ್ಲಿ ಕಂಡಾಸೆ ಇರುಳಲ್ಲಿ ಬಂದಾಸೆ
ಎಲ್ಲಾವೂ ಒಂದೇನೆ ನಿನ್ನೊಡನೆ ಇರುವಾಸೆ
ಬೇರೇನು ನಾ ಕೇಳೆ ನನ್ನಾಣೆ ನಲ್ಲೆ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ನಿನ್ನ ಬಿಡಲಾರೆ ನಾನೆಂದಿಗೂ
ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ
Labels:
೧೯೮೬,
SPB,
ಉಪೇಂದ್ರ ಕುಮಾರ್,
ಎಸ್. ಜಾನಕಿ,
ಚಿ. ಉದಯಶಂಕರ್,
ರಥಸಪ್ತಮಿ
Wednesday, June 1, 2011
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಚಿತ್ರ: ಮರೆಯಲಾಗದ ಕಥೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ರಮಣಿ
ವರ್ಷ: ೧೯೮೨
ಬರೆಯುವೆ ನಿನಗಾಗಿ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹುಣ್ಣಿಮೆಯ ದೀಪದಲ್ಲಿ ತಣ್ಣನೆಯ ರಾತ್ರಿಯಲ್ಲಿ
ಸಂಪಿಗೆಯ ತಂಪಿನಲ್ಲಿ ಇಂಪಾದ ರಾಗದಲಿ
ನಾ ಬರೆಯುವೆ
ಅರಗಿಣಿಯ ಭಾಷೆಯಲ್ಲಿ ಕೋಗಿಲೆಯ ರಾಗದಲ್ಲಿ
ಹಂಸನಡೆ ತಾಳದಲ್ಲಿ ಮುತ್ತಂಥ ಮಾತಿನಲಿ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹೂ ಬನದಿ ಆಯ್ದು ತಂದ ಮೊಗ್ಗಾದ ಮಲ್ಲಿಗೆಯಿಂದ
ಸವಿಜೇನ ಹನಿಹನಿಯಿಂದ ಪ್ರಣಯದ ಆನಂದದಿಂದ
ನಾ ಬರೆಯುವೆ
ನನ್ನಂತರಾಳದಿಂದ ಪುಟಿದೇಳೋ ಭಾವದಿಂದ
ಬಯಕೆಗಳ ಭಾರದಿಂದ ಕಣ್ಣುಗಳ ಮಿಂಚಿನಿಂದ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ರಮಣಿ
ವರ್ಷ: ೧೯೮೨
ಬರೆಯುವೆ ನಿನಗಾಗಿ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹುಣ್ಣಿಮೆಯ ದೀಪದಲ್ಲಿ ತಣ್ಣನೆಯ ರಾತ್ರಿಯಲ್ಲಿ
ಸಂಪಿಗೆಯ ತಂಪಿನಲ್ಲಿ ಇಂಪಾದ ರಾಗದಲಿ
ನಾ ಬರೆಯುವೆ
ಅರಗಿಣಿಯ ಭಾಷೆಯಲ್ಲಿ ಕೋಗಿಲೆಯ ರಾಗದಲ್ಲಿ
ಹಂಸನಡೆ ತಾಳದಲ್ಲಿ ಮುತ್ತಂಥ ಮಾತಿನಲಿ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹೂ ಬನದಿ ಆಯ್ದು ತಂದ ಮೊಗ್ಗಾದ ಮಲ್ಲಿಗೆಯಿಂದ
ಸವಿಜೇನ ಹನಿಹನಿಯಿಂದ ಪ್ರಣಯದ ಆನಂದದಿಂದ
ನಾ ಬರೆಯುವೆ
ನನ್ನಂತರಾಳದಿಂದ ಪುಟಿದೇಳೋ ಭಾವದಿಂದ
ಬಯಕೆಗಳ ಭಾರದಿಂದ ಕಣ್ಣುಗಳ ಮಿಂಚಿನಿಂದ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
Labels:
೧೯೮೨,
SPB,
ಉಪೇಂದ್ರ ಕುಮಾರ್,
ಚಿ. ಉದಯಶಂಕರ್,
ಮರೆಯಲಾಗದ ಕಥೆ,
ರಮಣಿ
Tuesday, December 21, 2010
ಬಾನಿಗೊಂದು ಎಲ್ಲೆ ಎಲ್ಲಿದೆ
ಚಿತ್ರ: ಪ್ರೇಮದ ಕಾಣಿಕೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರ ಕುಮಾರ್
ಗಾಯಕರು: ಡಾ|| ರಾಜ್ ಕುಮಾರ್
ವರ್ಷ: ೧೯೭೬
ಬಾನಿಗೊಂದು ಎಲ್ಲೆ ಎಲ್ಲಿದೆ... ನಿನ್ನಾಸೆಗೆಲ್ಲಿ ಕೊನೆಯಿದೆ...
ಏಕೆ ಕನಸು ಕಾಣುವೆ... ನಿಧಾನಿಸು ನಿಧಾನಿಸು...
ಬಾನಿಗೊಂದು ಎಲ್ಲೆ ಎಲ್ಲಿದೆ... ನಿನ್ನಾಸೆಗೆಲ್ಲಿ ಕೊನೆಯಿದೆ...
ಏಕೆ ಕನಸು ಕಾಣುವೆ... ನಿಧಾನಿಸು ನಿಧಾನಿಸು...
ಆಸೆ ಎಂಬ ಬಿಸಿಲುಗುದುರೆ ಏಕೆ ಏರುವೆ
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ
ಅವನ ನಿಯಮ ಮೀರಿ ಇಲ್ಲಿ ಏನೂ ಸಾಗದು
ನಾವು ನೆನೆಸಿದಂತೆ ಬಾಳಲೇನು ನಡೆಯದು
ವಿಷಾದವಾಗಲೀ ವಿನೋದವಾಗಲೀ ಅದೇನೆ ಆಗಲೀ ಅವನೆ ಕಾರಣ
ಬಾನಿಗೊಂದು ಎಲ್ಲೆ ಎಲ್ಲಿದೆ...
ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು
ಹರುಷವೊಂದೆ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ
ದುರಾಸೆಯೇತಕೆ ನಿರಾಸೆಯೇತಕೆ ಅದೇನೇ ಬಂದರೂ ಅವನ ಕಾಣಿಕೆ
ಬಾನಿಗೊಂದು ಎಲ್ಲೆ ಎಲ್ಲಿದೆ... ನಿನ್ನಾಸೆಗೆಲ್ಲಿ ಕೊನೆಯಿದೆ...
ಏಕೆ ಕನಸು ಕಾಣುವೆ... ನಿಧಾನಿಸು ನಿಧಾನಿಸು...
ನಿಧಾನಿಸು ನಿಧಾನಿಸು...
Labels:
೧೯೭೬,
ಉಪೇಂದ್ರ ಕುಮಾರ್,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ಪ್ರೇಮದ ಕಾಣಿಕೆ
Friday, September 24, 2010
ಹಾಲಲ್ಲಾದರೂ ಹಾಕು ನೀರಲ್ಲಾದರೂ
ಚಿತ್ರ : ದೇವತಾ ಮನುಷ್ಯ
ಸಾಹಿತ್ಯ : ಚಿ.ಉದಯ್ ಶಂಕರ್
ಸಂಗೀತ : ಉಪೇಂದ್ರ ಕುಮಾರ್
ಗಾಯಕರು : ಡಾ|| ರಾಜ್ ಕುಮಾರ್ ಹಾಗೂ ಬಿ. ಆರ್. ಛಾಯಾ
ವರ್ಷ : ೧೯೮೮
ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.
ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.
ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ, ಹಾಯಾಗಿರುವೆ ರಾಘವೇಂದ್ರ.
ಮುಳ್ಳಲ್ಲಾದರೂ ನೂಕು, ಕಲ್ಲಲ್ಲಾದರೂ ನೂಕು, ರಾಘವೇಂದ್ರ.
ಮುಳ್ಳಲ್ಲಾದರೂ ನೂಕು, ಕಲ್ಲಲ್ಲಾದರೂ ನೂಕು, ರಾಘವೇಂದ್ರ.
ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ, ಒಂದಾಗಿರುವೆ ರಾಘವೇಂದ್ರ.
ಬಿಸಿಲಲ್ಲೇ ಒಣಗಿಸು, ನೆರಳಲ್ಲೇ ಮಲಗಿಸು, ರಾಘವೇಂದ್ರ.
ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ, ನಗುನಗುತಾಲಿರುವೆ ರಾಘವೇಂದ್ರ.
ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು, ರಾಘವೇಂದ್ರ.
ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು, ರಾಘವೇಂದ್ರ
ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು, ರಾಘವೇಂದ್ರ
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು, ನೀನೇ ಹೇಳು, ರಾಘವೇಂದ್ರ.
ಎಲ್ಲಿದ್ದಾರೇನು ನಾ, ಹೇಗಿದ್ದರೇನು ನಾ, ರಾಘವೇಂದ್ರ.
ನಿನ್ನಲ್ಲಿ ಶರಣಾಗಿ, ನೀ ನನ್ನ ಉಸಿರಾಗಿ, ಬಾಳಿದರೆ ಸಾಕು ರಾಘವೇಂದ್ರ.
Labels:
೧೯೮೮,
ಉಪೇಂದ್ರ ಕುಮಾರ್,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ದೇವತಾ ಮನುಷ್ಯ,
ಬಿ. ಆರ್. ಛಾಯಾ
Subscribe to:
Posts (Atom)