Showing posts with label ಗಾಳಿ ಮಾತು. Show all posts
Showing posts with label ಗಾಳಿ ಮಾತು. Show all posts
Monday, October 25, 2010
ನಾನೇನು ನೀನೇನು ಅವನೇನು
ಚಿತ್ರ: ಗಾಳಿಮಾತು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೧
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಬಡ ಜನರು ಬಲ್ಲಿದರು ನಮ್ಮವರೇ ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಕಪ್ಪನೆಯ ಮೋಡಗಳು ಕರಗುತ ನೀರಾಗಿ
ಮಳೆಯನು ನೆಲದಲಿ ಹರಿಸುತಿದೆ
ನೆಲವೆಲ್ಲ ನಗುನಗುತ ಹಚ್ಚನೆ ಹಸಿರಾಗಿ
ಬೆಳೆಯನು ಜನರಿಗೆ ಕೊಡುತಲಿರೆ
ಸಂತೋಷದಿ ನೀ ಬಾಳದೇ
ಹೇ ಸಂತೋಷದಿ ನೀ ಬಾಳದೇ
ಏಕೆ ಹೊಡೆದಾಡಿ ಕಾದಾಡುವೇ
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಬಡ ಜನರು ಬಲ್ಲಿದರು ನಮ್ಮವರೇ ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಗಾಳಿಯನು ನೀರನ್ನು ತಂದವ ನೀನಲ್ಲ
ಈ ನಿಜ ಏತಕೆ ಅರಿತಿಲ್ಲ
ಹಣ್ಣಿನಲಿ ಸಿಹಿಯನ್ನು ತಂದವ ನೀನಲ್ಲ
ಅರಿಯುವ ಜಾಣ್ಮೆಯೂ ಏಕಿಲ್ಲ
ನಿನದಲ್ಲದ ಸಂಪತ್ತಿಗೆ
ಹೇ ನಿನದಲ್ಲದ ಈ ಸಂಪತ್ತಿಗೆ ಏಕೆ ಬಡಿದಾಡಿ ಹೋರಾಡುವೆ
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಬಡ ಜನರು ಬಲ್ಲಿದರು ನಮ್ಮವರೇ ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
Saturday, October 9, 2010
ನಮ್ಮೂರ ಸಂತೇಲಿ
ಚಿತ್ರ : ಗಾಳಿ ಮಾತು
ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ರಾಜನ್ - ನಾಗೇಂದ್ರ
ಗಾಯಕರು : ರಮಣ(ರೇಣುಕ) ಮತ್ತು ನಾಗೇಂದ್ರ
ವರ್ಷ: ೧೯೮೧
ಹೇ...ಹೇ....
ಲಲ...ಲಲ...ಲಲ...
ನಮ್ಮೂರ ಸಂತೇಲಿ ಮುಸ್ಸಂಜೆ ಹೊತ್ತಲಿ
ಹಿಂದ್ ಹಿಂದೆ ಬಂದೋಳು ನೀನ್ ತಾನೇ
ನಿನ್ನ ನೋಡಿ ನಕ್ಕೋನು ನಾನ್ ತಾನೇ
ನಮ್ಮೂರ ಸಂತೇಲಿ ಮುಸ್ಸಂಜೆ ಹೊತ್ತಲಿ
ಹಿಂದ್ ಹಿಂದೆ ಬಂದೋಳು ನೀನ್ ತಾನೇ
ನಿನ್ನ ನೋಡಿ ನಕ್ಕೋನು ನಾನ್ ತಾನೇ
ನಮ್ಮೂರ ಜಾತ್ರೆಲಿ ಪೇಟೇಯ ಬೀದಿಲೀ
ಜಡೆಯನ್ನು ಎಳೆದವ ನೀನ್ ತಾನೇ
ನಿನ್ನ ಕೆನ್ನೆಗೆ ಹೊಡೆದೋಳು ನಾನ್ ತಾನೇ
ನಮ್ಮೂರ ಜಾತ್ರೆಲಿ ಪೇಟೇಯ ಬೀದಿಲೀ
ಜಡೆಯನ್ನು ಎಳೆದವ ನೀನ್ ತಾನೇ
ನಿನ್ನ ಕೆನ್ನೆಗೆ ಹೊಡೆದೋಳು ನಾನ್ ತಾನೇ
ಹೊಡೆದರೆ ನಿನ್ನಾ ಸುಮ್ಮನೆ ಬಿಡುವೆನೆ ಸುಳ್ಳೇಕೆ ಆಡ್ತಿ
ಹೊಡೆದರೆ ನಿನ್ನಾ ಸುಮ್ಮನೆ ಬಿಡುವೆನೆ ಸುಳ್ಳೇಕೆ ಆಡ್ತಿ
ಬಿದ್ದರೂ ಮೀಸೆ ಮಣ್ಣಾಗ್ಲಿಲ್ಲ ಎಂದೇಕೆ ಹೇಳ್ತಿ
ಬಿದ್ದರೂ ಮೀಸೆ ಮಣ್ಣಾಗ್ಲಿಲ್ಲ ಎಂದೇಕೆ ಹೇಳ್ತಿ
ನಮ್ಮಲಿ ಏಕೆ ಜಗಳವು ಇನ್ನೂ ನೀನೇ ನನ್ ಹೆಂಡ್ತಿ
ನಮ್ಮಲಿ ಏಕೆ ಜಗಳವು ಇನ್ನೂ ನೀನೇ ನನ್ ಹೆಂಡ್ತಿ
ನನ್ನಲಿ ಹೇಳು ಹಾಗಾದರೆ ನೀ ಸಂಬಳ ಏನ್ ತರ್ತಿ
ನನ್ನಲಿ ಹೇಳು ಹಾಗಾದರೆ ನೀ ಸಂಬಳ ಏನ್ ತರ್ತಿ
No Job...No vacancy
You....Get Out....
I don't see...I don't see...
I will see....I will see....
Labels:
೧೯೮೧,
ಗಾಳಿ ಮಾತು,
ಚಿ. ಉದಯಶಂಕರ್,
ನಾಗೇಂದ್ರ,
ರಮಣ(ರೇಣುಕ),
ರಾಜನ್-ನಾಗೇಂದ್ರ
ಬಯಸದೆ ಬಳಿ ಬಂದೆ
ಚಿತ್ರ: ಗಾಳಿಮಾತು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೧
ಬಯಸದೆ ಬಳಿ ಬಂದೆ ಬಯಕೆಯ ಸಿರಿ ತಂದೆ ನಿನ್ನ ಅಂದಕ್ಕೆ ಬೆರೆಗಾದೆ
ಕರೆಯದೆ ಬಳಿ ಬಂದೆ ಸಡಗರ ತರಲೆಂದೆ ಮನ ಒಂದಾಗಿ ಜೊತೆಯಾದೆ
ಉರಿ ಬಿಸಿಲು ತಂಪಾಯ್ತು ನಿನ್ನ ನಾ ನೊಡಲು
ಮೈ ಏಕೊ ಬಿಸಿ ಆಯ್ತು ನೀನು ಬಳಿ ನಿಂತು ನಗಲು
ನೀ ನಡೆವ ಹಾದಿಯಲಿ ಕಲ್ಲು ಮೃದುವಾಯಿತು
ಮುಳ್ಳೆಲ್ಲ ಹೂವಾಗಿ ಭೂಮಿಯೇ ಸ್ವರ್ಗವಾಯ್ತು
ನಿಂತಲ್ಲೆ ನೀರಾಗಿ ನಾ ಕರಗಿಹೋದೆ
ಕರೆಯದೆ ಬಳಿ ಬಂದೆ ಸಡಗರ ತರಲೆಂದೆ ಮನ ಒಂದಾಗಿ ಜೊತೆಯಾದೆ
ಬಯಸದೆ ಬಳಿ ಬಂದೆ ಬಯಕೆಯ ಸಿರಿ ತಂದೆ ನಿನ್ನ ಅಂದಕ್ಕೆ ಬೆರೆಗಾದೆ
ಸೊಗಸೆಂಬ ನುಡಿಗಿಂತ ಸೊಗಸು ಈ ರೂಪವು
ಹಿತವೆಂಬ ನುಡಿಗಿಂತ ಹಿತವು ಈ ನಿನ್ನ ಒಲವು
ನಿನ್ನಿಂದ ಆನಂದ ಇಂದು ನಾ ಕಂಡೆನು
ಈ ನಿನ್ನ ಸ್ನೇಹವನು ಇನ್ನು ಎಂದೆಂದು ಬಿಡೆನು
ಸವಿಯಾದ ಮಾತಿಂದ ಹೊಸ ಬಾಳು ತಂದೆ
ಬಯಸದೆ ಬಳಿ ಬಂದೆ ಬಯಕೆಯ ಸಿರಿ ತಂದೆ ನಿನ್ನ ಅಂದಕ್ಕೆ ಬೆರೆಗಾದೆ
ಕರೆಯದೆ ಬಳಿ ಬಂದೆ ಸಡಗರ ತರಲೆಂದೆ ಮನ ಒಂದಾಗಿ ಜೊತೆಯಾದೆ
Labels:
೧೯೮೧,
SPB,
ಎಸ್. ಜಾನಕಿ,
ಗಾಳಿ ಮಾತು,
ಚಿ. ಉದಯಶಂಕರ್,
ರಾಜನ್-ನಾಗೇಂದ್ರ
Wednesday, September 29, 2010
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ
ಚಿತ್ರ: ಗಾಳಿ ಮಾತು
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಜಾನಕಿ
ವರ್ಷ: ೧೯೮೧
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ..
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಅರಳಿರುವ ಹೂವಿನಲ್ಲೀ ನಿನ್ನ ನೋಟವಾ
ಹರಿಯುತಿಹ ನೀರಿನಲ್ಲೀ ನಿನ್ನ ಓಟವಾ
ಇಂಪಾದ ಗಾನದಲ್ಲೀ ನಿನ್ನ ಮೊಗದ ಭಾವವಾ
ಮಳೆ ಬಿಲ್ಲ ಬಣ್ಣದಲ್ಲಿ ನಿನ್ನ ಅಂದವಾ
ನವಿಲಾಡೊ ನಾಟ್ಯದಲ್ಲೀ ನಿನ್ನ ಚಂದವಾ
ತಂಪಾದ ಗಾಳಿಯಲ್ಲೀ ನೀನಾಡೋ ಆಟವಾ
ದಿನವೆಲ್ಲಾ ನಾ ಕಂಡೇ ನಾ ಕಂಡು ಬೆರೆಗಾದೆ...
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೇ...
ಮಿನುಗುತಿಹ ತಾರೆಯೆಲ್ಲಾ ನಿನ್ನ ಕಂಗಳೋ
ನಗುತಿರಲು ಭೂಮಿಗೆಲ್ಲಾ ಬೆಳದಿಂಗಳೋ
ಆ ಬೆಳ್ಳೀ ಮೋಡವೆಲ್ಲಾ ನೀ ಬರೆದ ಬೊಂಬೆಗಳೋ
ಮೂಡಣದ ಅಂಚಿನಿಂದಾ ನಿನ್ನ ಪಯಣವೋ
ಮುಂಜಾನೆ ಕಾಣೋ ಕೆಂಪು ಚಂದುಟಿಯ ಬಣ್ಣವೋ
ಆಗಸದ ನೀಲಿಯೆಲ್ಲಾ ನೀ ನಡೆವ ಹಾದಿಯೋ
ನಿನ್ನಂತೇ ಯಾರಿಲ್ಲಾ ನಿನ್ನಲ್ಲೇ ಮನಸೆಲ್ಲಾ...
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೇ...
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ..
ಒಮ್ಮೆ ನಿನ್ನನ್ನು ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
Labels:
೧೯೮೧,
ಎಸ್. ಜಾನಕಿ,
ಗಾಳಿ ಮಾತು,
ಚಿ. ಉದಯಶಂಕರ್,
ರಾಜನ್-ನಾಗೇಂದ್ರ
Subscribe to:
Posts (Atom)