Showing posts with label ಮಾನಸ ಸರೋವರ. Show all posts
Showing posts with label ಮಾನಸ ಸರೋವರ. Show all posts

Wednesday, February 16, 2011

ವೇದಾಂತಿ ಹೇಳಿದನು



ಚಿತ್ರ: ಮಾನಸ ಸರೋವರ
ಸಾಹಿತ್ಯ : ಜಿ.ಎಸ್. ಶಿವರುದ್ರಪ್ಪ
ಸಂಗೀತ : ವಿಜಯಭಾಸ್ಕರ್
ಗಾಯಕರು : ಪಿ. ಬಿ. ಶ್ರೀನಿವಾಸ್
ವರ್ಷ: ೧೯೮೩

ವೇದಾಂತಿ ಹೇಳಿದನು.. ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು.. ಮಣ್ಣೆಲ್ಲ ಹೊನ್ನು ಹೊನ್ನು
ವೇದಾಂತಿ ಹೇಳಿದನು.. ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು.. ಮಣ್ಣೆಲ್ಲ ಹೊನ್ನು ಹೊನ್ನು

ವೇದಾಂತಿ ಹೇಳಿದನು... ಈ ಹೆಣ್ಣು ಮಾಯೆ, ಮಾಯೇ...
ಕವಿಯೊಬ್ಬ ಕನವರಿಸಿದನು.. ಓ.. ಇವಳೇ ಚೆಲುವೆ...
ಇವಳ ಜೊತೆಯಲ್ಲಿ ನಾನು ಸ್ವರ್ಗವನೆ ಗೆಲ್ಲುವೆ... ಸ್ವರ್ಗವನೇ ಗೆಲ್ಲುವೆ...

ವೇದಾಂತಿ ಹೇಳಿದನು.. ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು.. ಮಣ್ಣೆಲ್ಲ ಹೊನ್ನು ಹೊನ್ನು

ವೇದಾಂತಿ ಹೇಳಿದನು.. ಈ ಬದುಕು ಶೂನ್ಯ ಶೂನ್ಯ
ಕವಿ ನಿಂತು ಸಾರಿದನು.. ಓ.. ಇದು ಅಲ್ಲ ಶೂನ್ಯ.
ಜನ್ಮ ಜನ್ಮದಿ ಸವಿಯೇ.. ನಾನೆಷ್ಟು ಧನ್ಯ ನಾನೆಷ್ಟು ಧನ್ಯ

ವೇದಾಂತಿ ಹೇಳಿದನು.. ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು.. ಮಣ್ಣೆಲ್ಲ ಹೊನ್ನು ಹೊನ್ನು
ವೇದಾಂತಿ ಹೇಳಿದನು.. ಹೊನ್ನೆಲ್ಲ ಮಣ್ಣು ಮಣ್ಣು
ಕವಿಯೊಬ್ಬ ಹಾಡಿದನು.. ಮಣ್ಣೆಲ್ಲ ಹೊನ್ನು ಹೊನ್ನು
ಮಣ್ಣೆಲ್ಲ ಹೊನ್ನು ಹೊನ್ನು ಮಣ್ಣೆಲ್ಲ ಹೊನ್ನು ಹೊನ್ನು

Friday, December 3, 2010

ಹಾಡು ಹಳೆಯದಾದರೇನು



ಚಿತ್ರ : ಮಾನಸ ಸರೋವರ
ಸಾಹಿತ್ಯ : ಡಾ|| ಜಿ.ಎಸ್.ಶಿವರುದ್ರಪ್ಪ
ಸಂಗೀತ : ವಿಜಯಭಾಸ್ಕರ್
ಗಾಯಕರು : ವಾಣಿ ಜಯರಾಂ
ವರ್ಷ: ೧೯೮೩

ಹಾಡು...ಹಾಡು ...
ಹಾಡು ಹಳೆಯದಾದರೇನು ಭಾವ ನವನವೀನ
ಹಾಡು...ಹಾಡು ...
ಹಾಡು ಹಳೆಯದಾದರೇನು ಭಾವ ನವನವೀನ
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ

ಹಾಡು...ಹಾಡು ...ಹಾಡು ಹಳೆಯದಾದರೇನು ಭಾವ ನವನವೀನ
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ

ಹಳೆಯ ಹಾಡು ಹಾಡು ಮತ್ತೆ ಅದನೆ ಕೇಳಿ ತಣಿಯುವೆ
ಹಳೆಯ ಹಾಡು ಹಾಡು ಮತ್ತೆ ಅದನೆ ಕೇಳಿ ತಣಿಯುವೆ
ಹಳೆಯ ಹಾಡಿನಿಂದ ಹೊಸತು ಜೀವನಾ ಕಟ್ಟುವೆ
ಹಳೆಯ ಹಾಡಿನಿಂದ ಹೊಸತು ಜೀವನಾ ಕಟ್ಟುವೆ

ಹಾಡು...ಹಾಡು ...ಹಾಡು ಹಳೆಯದಾದರೇನು ಭಾವ ನವನವೀನ
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ

ಹಮ್ಮು ಬಿಮ್ಮು ಒಂದೂ ಇಲ್ಲ ಹಾಡು ಹೃದಯ ತೆರೆದಿದೆ
ಹಮ್ಮು ಬಿಮ್ಮು ಒಂದೂ ಇಲ್ಲ ಹಾಡು ಹೃದಯ ತೆರೆದಿದೆ
ಹಾಡಿನಲ್ಲಿ ಲೀನವಾಗಲೆನ್ನ ಮನವು ಕಾದಿದೆ
ಹಾಡಿನಲ್ಲಿ ಲೀನವಾಗಲೆನ್ನ ಮನವು ಕಾದಿದೆ

ಹಾಡು...ಹಾಡು ...ಹಾಡು ಹಳೆಯದಾದರೇನು ಭಾವ ನವನವೀನ
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ

ಹಾಡು...ಹಾಡು ...
ಹಾಡು ಹಳೆಯದಾದರೇನು ಭಾವ ನವನವೀನ