Showing posts with label ರವೀ (ಕೆ.ಎಸ್‌.ಎಲ್‌.ಸ್ವಾಮಿ). Show all posts
Showing posts with label ರವೀ (ಕೆ.ಎಸ್‌.ಎಲ್‌.ಸ್ವಾಮಿ). Show all posts

Friday, September 24, 2010

ಸೂರ್ಯಂಗೂ ಚಂದ್ರಂಗೂ ಬಂದಾರೆ



ಚಿತ್ರ: ಶುಭಮಂಗಳ
ಸಾಹಿತ್ಯ: ಎಂ.ಎನ್. ವ್ಯಾಸರಾವ್
ಸಂಗೀತ: ವಿಜಯಭಾಸ್ಕರ್
ಗಾಯಕರು: ರವೀ (ಕೆ.ಎಸ್‌.ಎಲ್‌.ಸ್ವಾಮಿ)
ವರ್ಷ: ೧೯೭೫

ಸೂರ್ಯಂಗೂ ಚಂದ್ರಂಗೂ ಬಂದಾರೆ ಮುನಿಸು
ನಗತಾದ ಭೂತಾಯಿ ಮನಸು
ಸೂರ್ಯಗೂ ಚಂದ್ರಂಗೂ ಬಂದಾರೆ ಮುನಿಸು
ನಗತಾದ ಭೂತಾಯಿ ಮನಸು
ರಾಜಂಗೂ ರಾಣೀಗೂ ಮುರಿದೋದ್ರೆ ಮನಸು
ಅರಮನ್ಯಾಗೆ ಏನೈತೆ ಸೊಗಸು,
ಅರಮನ್ಯಾಗೆ ಏನೈತೆ ಸೊಗಸು

ಮನೆತುಂಬ ಹರಿದೈತೆ ಕೆನೆಹಾಲು ಮೊಸರು
ಎದೆಯಾಗೆ ಬೆರೆತೈತೆ ಬ್ಯಾಸರದಾ ಉಸಿರು, ಬ್ಯಾಸರದಾ ಉಸಿರು
ಗುಡಿಯಾಗೆ ಬೆಳ್‍ಗೈತೆ ತುಪ್ಪಾದ ದೀಪ
ನುಡಿಯಾಗೆ ನಡೆಯಾಗೆ ಸಿಡಿದೈತೆ ಕ್ವಾಪ, ಸಿಡಿದೈತೆ ಕ್ವಾಪ

ಸೂರ್ಯಂಗೂ ಚಂದ್ರಂಗೂ ಬಂದಾರೆ ಮುನಿಸು
ನಗತಾದ ಭೂತಾಯಿ ಮನಸು
ರಾಜಂಗೂ ರಾಣೀಗೂ ಮುರಿದೋದ್ರೆ ಮನಸು
ಅರಮನ್ಯಾಗೆ ಏನೈತೆ ಸೊಗಸು, ಅರಮನ್ಯಾಗೆ ಏನೈತೆ ಸೊಗಸು

ಬೆಳದಿಂಗಳು ಚೆಲ್ಲೈತೆ ಅಂಗಳದಾ ಹೊರಗೇ
ಕರಿಮೋಡ ಮುಸುಕೈತೆ ಮನಸಿನಾ ಒಳಗೇ
ಬಯಲಾಗೆ ತುಳುಕೈತೆ ಹರುಸದಾ ಒನಲು
ಪ್ರೀತಿಯಾ ತೇರಿಗೇ ಬಡಿದೈತೆ ಸಿಡಿಲು,ಬಡಿದೈತೆ ಸಿಡಿಲು

ಸೂರ್ಯಗೂ ಚಂದ್ರಂಗೂ ಬಂದಾರೆ ಮುನಿಸು
ನಗತಾದ ಭೂತಾಯಿ ಮನಸು
ರಾಜಂಗೂ ರಾಣೀಗೂ ಮುರಿದೋದ್ರೆ ಮನಸು
ಅರಮನ್ಯಾಗೆ ಏನೈತೆ ಸೊಗಸು, ಅರಮನ್ಯಾಗೆ ಏನೈತೆ ಸೊಗಸು

ಮುಂಬಾಗಿಲ ರಂಗೋಲಿ ಮನಗೈತೆ ಹಾಯಾಗೀ
ಕಿರುನಗೆಯ ಮುಖವೆಲ್ಲ ಮುದುಡೈತೆ ಸೊರಗೀ
ಆನಂದ ಸಂತೋಸ ಈ ಮನೆಗೆ ಬರಲೀ
ಬೇಡುವೆನು ಕೈಮುಗಿದು ಆ ನನ್ನ ಸಿವನಾ,ಆ ನನ್ನ ಸಿವನಾ

ಸೂರ್ಯಗೂ ಚಂದ್ರಂಗೂ ಬಂದಾರೆ ಮುನಿಸು
ನಗತಾದ ಭೂತಾಯಿ ಮನಸು
ಸೂರ್ಯಗೂ ಚಂದ್ರಂಗೂ ಬಂದಾರೆ ಮುನಿಸು
ನಗತಾದ ಭೂತಾಯಿ ಮನಸು
ರಾಜಂಗೂ ರಾಣೀಗೂ ಮುರಿದೋದ್ರೆ ಮನಸು
ಅರಮನ್ಯಾಗೆ ಏನೈತೆ ಸೊಗಸು, ಅರಮನ್ಯಾಗೆ ಏನೈತೆ ಸೊಗಸು