Showing posts with label ಸತ್ಯಂ. Show all posts
Showing posts with label ಸತ್ಯಂ. Show all posts
Thursday, July 7, 2011
ಒಂದು ಮಾತು... ನನಗೆ ಗೊತ್ತು
ಚಿತ್ರ : ಕೆರಳಿದ ಸಿಂಹ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಸತ್ಯಂ
ಗಾಯನ : ಡಾ|| ರಾಜ್ ಕುಮಾರ್, ಸುಲೋಚನ
ವರ್ಷ: ೧೯೮೨
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ಈ ದಿನ ಬೇರೆ ವಿಷಯ ತಿಳಿಸುವೆ
ಅಲ್ಲಿಗೆ ಬಂದರೆ ಸುಮ್ಮನೆ ಕೆಣಕುವೆ
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ಸಂಜೆಯ ಕೆಂಪು ಗಾಳಿಯ ತಂಪು
ಹೊಸ ಹೊಸ ಬಯಕೆ ತಂದಾಗ
ತುಂಬದ ವಿರಹ ಬಂದರೆ ಸನಿಹ
ಸಾರ್ಥಕ ನಮ್ಮ ಅನುರಾಗ
ಮೋಹದ ಮಾತನಾಡಿ
ಕಣ್ಣಲೇ ಮೋಡಿ ಮಾಡಿ
ಈಗೇಕೆ ನನ್ನಲಿ ಆಸೆಯ ತರುವೆ
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ತೋಳಲಿ ಹೀಗೆ ಬಳಸಿದೆ ಏಕೆ
ಎದೆ ಜಿಲ್ ಎಂದಿದೆ ನನಗೀಗ
ಮೈಯಲಿ ಮಿಂಚು ತುಂಬುವ ಸಂಚು
ಮಾಡುವೆ ಏಕೆ ನೀನೀಗ
ಯಾರೂ ಇಲ್ಲದಾಗ ಆಸೆಯು ಮೂಡಿದಾಗ
ಈ ಬಿಂಕ ಬಿಗುಮಾನ ನಿನಗೇತಕೆ
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ಈ ದಿನ ಬೇರೆ ವಿಷಯ ತಿಳಿಸುವೆ
ಅಲ್ಲಿಗೆ ಬಂದರೆ ಸುಮ್ಮನೆ ಕೆಣಕುವೆ
Labels:
೧೯೮೨,
ಕೆರಳಿದ ಸಿಂಹ,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ಸತ್ಯಂ,
ಸುಲೋಚನ
Thursday, June 2, 2011
ಈ ಗುಲಾಬಿಯು ನಿನಗಾಗಿ
ಚಿತ್ರ: ಮುಳ್ಳಿನ ಗುಲಾಬಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ಆತುರ ತರುವ ವೇದನೆ ಏನು
ಆತುರ ತರುವ ವೇದನೆ ಏನು ಜೀವದ ಜೀವವು ಪ್ರಿಯತಮೆ ನೀನು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ಕಾಣದೆ ಹೋದರೆ ಅರೆಕ್ಷಣ ನಿನ್ನ
ಕಾಣದೆ ಹೋದರೆ ಅರೆಕ್ಷಣ ನಿನ್ನ ಮರುಕ್ಷಣ ಪ್ರಿಯತಮೆ ನನ್ನ ಸಾವು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ಆತುರ ತರುವ ವೇದನೆ ಏನು
ಆತುರ ತರುವ ವೇದನೆ ಏನು ಜೀವದ ಜೀವವು ಪ್ರಿಯತಮೆ ನೀನು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ಕಾಣದೆ ಹೋದರೆ ಅರೆಕ್ಷಣ ನಿನ್ನ
ಕಾಣದೆ ಹೋದರೆ ಅರೆಕ್ಷಣ ನಿನ್ನ ಮರುಕ್ಷಣ ಪ್ರಿಯತಮೆ ನನ್ನ ಸಾವು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
Wednesday, June 1, 2011
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಚಿತ್ರ: ಸಾಹಸ ಸಿಂಹ
ಸಾಹಿತ್ಯ: ಅರ್.ಎನ್.ಜಯಗೋಪಾಲ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಕನಸಲ್ಲೂ ನಿನ್ನ ರೂಪ ಈ ಮನದಲ್ಲಿ ತರಲು ತಾಪ
ಕಣ್ಣಲ್ಲಿ ಮುಚ್ಚಿ ನಿನ್ನಾ ನಾ ಕರೆದೊಯ್ವ ಆಸೆ ಚಿನ್ನಾ
ನಗುವೆಂಬ ಬಲೆಯ ಬೀಸಿ ನಾ ನುಡಿಯಲ್ಲಿ ಜೇನಾ ಸೂಸಿ
ಸೆರೆಹಿಡಿವೆ ಬಿಡದೆ ನಿನ್ನಾ....
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮಿಂಚಂತೆ ಸುಳಿದು ನೀನು ಮರೆಯಾಗಿ ಹೋದರೇನು
ಸುಳಿವನ್ನು ತಿಳಿಯಬಲ್ಲ ಹೊಸ ಮೋಡಿ ಬಲ್ಲೆ ನಾನು
ಬಾಳಲ್ಲಿ ಬಿಡಿಸದಂಥ ಎಂದೆಂದೂ ಮುರಿಯದಂಥ
ಬಂಧನದೇ ಹಿಡಿವೆ ನಿನ್ನ...
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಸಾಹಿತ್ಯ: ಅರ್.ಎನ್.ಜಯಗೋಪಾಲ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಕನಸಲ್ಲೂ ನಿನ್ನ ರೂಪ ಈ ಮನದಲ್ಲಿ ತರಲು ತಾಪ
ಕಣ್ಣಲ್ಲಿ ಮುಚ್ಚಿ ನಿನ್ನಾ ನಾ ಕರೆದೊಯ್ವ ಆಸೆ ಚಿನ್ನಾ
ನಗುವೆಂಬ ಬಲೆಯ ಬೀಸಿ ನಾ ನುಡಿಯಲ್ಲಿ ಜೇನಾ ಸೂಸಿ
ಸೆರೆಹಿಡಿವೆ ಬಿಡದೆ ನಿನ್ನಾ....
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮಿಂಚಂತೆ ಸುಳಿದು ನೀನು ಮರೆಯಾಗಿ ಹೋದರೇನು
ಸುಳಿವನ್ನು ತಿಳಿಯಬಲ್ಲ ಹೊಸ ಮೋಡಿ ಬಲ್ಲೆ ನಾನು
ಬಾಳಲ್ಲಿ ಬಿಡಿಸದಂಥ ಎಂದೆಂದೂ ಮುರಿಯದಂಥ
ಬಂಧನದೇ ಹಿಡಿವೆ ನಿನ್ನ...
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ಚಿತ್ರ: ತಾಯಿಯ ಹೊಣೆ
ಸಂಗೀತ: ಸತ್ಯಂ
ಸಾಹಿತ್ಯ: ಚಿ.ಉದಯಶಂಕರ್
ಗಾಯಕರು: ರಾಜ್ ಕುಮಾರ್ ಭಾರತಿ, ಪಿ. ಸುಶೀಲಾ
ವರ್ಷ: ೧೯೮೫
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ನಿನ್ನಾ ಸ್ನೇಹ ನಿನ್ನಾ ಪ್ರೇಮ ಕನಸಿನಾ ಸಿರಿಯೋ ಓ ಕನಸಿನಾ ಸಿರಿಯೋ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ಅರಳಿದ ತಾವರೆ ಹೂವಿನ ಹಾಗೆ ಚೆಲುವೆಯಾ ಮೊಗವು
ಚಂದ್ರನ ಕಂಡಾ ನೈದಿಲೆಯಂತೆ ನಿನ್ನ ಈ ನಗುವು
ಕಾಮಿನಿ ಅರಗಿಣಿ
ನಿನ್ನ ನುಡಿಗಳು ವೀಣೆ ಸ್ವರಗಳು ಅರಿಯದೆ ಹೋದೆ ಗೆಳತಿ ಬೆರಗಾದೆ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ತಣ್ಣನೆ ಗಾಳಿ ಸೋಕಿದ ಹಾಗೆ ಸುಖವನು ಕಂಡೆ
ಬಿಸಿಲಲಿ ಕರಗೋ ಮಂಜಿನ ಹಾಗೆ ಕಾಣದೇ ಹೋದೆ
ಪ್ರೇಮವೇ ತಾಳೆನೇ
ಮರೆಯಲಾರದೆ ದಾರಿ ಕಾಣದೆ ನಾನು ನೊಂದಿರುವೆ
ನಲ್ಲ ಎಲ್ಲಿರುವೇ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ನಿನ್ನಾ ಸ್ನೇಹ ನಿನ್ನಾ ಪ್ರೇಮ ಕನಸಿನಾ ಸಿರಿಯೋ ಓ ಕನಸಿನಾ ಸಿರಿಯೋ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ಸಂಗೀತ: ಸತ್ಯಂ
ಸಾಹಿತ್ಯ: ಚಿ.ಉದಯಶಂಕರ್
ಗಾಯಕರು: ರಾಜ್ ಕುಮಾರ್ ಭಾರತಿ, ಪಿ. ಸುಶೀಲಾ
ವರ್ಷ: ೧೯೮೫
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ನಿನ್ನಾ ಸ್ನೇಹ ನಿನ್ನಾ ಪ್ರೇಮ ಕನಸಿನಾ ಸಿರಿಯೋ ಓ ಕನಸಿನಾ ಸಿರಿಯೋ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ಅರಳಿದ ತಾವರೆ ಹೂವಿನ ಹಾಗೆ ಚೆಲುವೆಯಾ ಮೊಗವು
ಚಂದ್ರನ ಕಂಡಾ ನೈದಿಲೆಯಂತೆ ನಿನ್ನ ಈ ನಗುವು
ಕಾಮಿನಿ ಅರಗಿಣಿ
ನಿನ್ನ ನುಡಿಗಳು ವೀಣೆ ಸ್ವರಗಳು ಅರಿಯದೆ ಹೋದೆ ಗೆಳತಿ ಬೆರಗಾದೆ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ತಣ್ಣನೆ ಗಾಳಿ ಸೋಕಿದ ಹಾಗೆ ಸುಖವನು ಕಂಡೆ
ಬಿಸಿಲಲಿ ಕರಗೋ ಮಂಜಿನ ಹಾಗೆ ಕಾಣದೇ ಹೋದೆ
ಪ್ರೇಮವೇ ತಾಳೆನೇ
ಮರೆಯಲಾರದೆ ದಾರಿ ಕಾಣದೆ ನಾನು ನೊಂದಿರುವೆ
ನಲ್ಲ ಎಲ್ಲಿರುವೇ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
ನಿನ್ನಾ ಸ್ನೇಹ ನಿನ್ನಾ ಪ್ರೇಮ ಕನಸಿನಾ ಸಿರಿಯೋ ಓ ಕನಸಿನಾ ಸಿರಿಯೋ
ಮುಗಿಲ ಮಲ್ಲಿಗೆಯೋ ಗಗನದಾ ತಾರೆಯೋ
Labels:
೧೯೮೫,
ಚಿ. ಉದಯಶಂಕರ್,
ತಾಯಿಯ ಹೊಣೆ,
ಪಿ. ಸುಶೀಲ,
ರಾಜ್ಕುಮಾರ್ ಭಾರತಿ,
ಸತ್ಯಂ
Wednesday, January 5, 2011
ಬಂಗಾರದ ಬೊಂಬೆಯೇ
ಚಿತ್ರ: ಮೂಗನ ಸೇಡು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೦
ಬಂಗಾರದ ಬೊಂಬೆಯೇ ಮಾತನಾಡೇ
ಬಂಗಾರದ ಬೊಂಬೆಯೇ ಮಾತನಾಡೇ
ಸಿಂಗಾರಿಯ ಬಾಳು ಬೆಳದಿಂಗಳಾಯಿತು
ಬಂಗಾರದ ಕೋಗಿಲೆ ನನ್ನ ಕಂಡು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
ಬಂಗಾರದ ಕೋಗಿಲೆ...
ಕವಿಯಂತೆ ನೀನಂದ ಸವಿಯಾದ ಮಾತಿಂದ
ಹೊಸದಾದ ಆನಂದ ನಾ ಕಂಡೆನು
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ನುಡಿಸಲು ನಾನಿಂದು ಕವಿಯಾದೆನು
ಬಂಗಾರದ ಬೊಂಬೆಯೇ
ಜೊತೆಯಾಗಿ ನಡೆದಾಗ ಹಿತವಾಗಿ ಸೆಳೆದಾಗ
ಅನುರಾಗ ಹೊಸ ರಾಗ ಕೇಳೆಂದಿತು
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಾಣಲು ನಿನ್ನಲ್ಲಿ ಮನ ಸೋತಿತು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೦
ಬಂಗಾರದ ಬೊಂಬೆಯೇ ಮಾತನಾಡೇ
ಬಂಗಾರದ ಬೊಂಬೆಯೇ ಮಾತನಾಡೇ
ಸಿಂಗಾರಿಯ ಬಾಳು ಬೆಳದಿಂಗಳಾಯಿತು
ಬಂಗಾರದ ಕೋಗಿಲೆ ನನ್ನ ಕಂಡು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
ಬಂಗಾರದ ಕೋಗಿಲೆ...
ಕವಿಯಂತೆ ನೀನಂದ ಸವಿಯಾದ ಮಾತಿಂದ
ಹೊಸದಾದ ಆನಂದ ನಾ ಕಂಡೆನು
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ನುಡಿಸಲು ನಾನಿಂದು ಕವಿಯಾದೆನು
ಬಂಗಾರದ ಬೊಂಬೆಯೇ
ಜೊತೆಯಾಗಿ ನಡೆದಾಗ ಹಿತವಾಗಿ ಸೆಳೆದಾಗ
ಅನುರಾಗ ಹೊಸ ರಾಗ ಕೇಳೆಂದಿತು
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಾಣಲು ನಿನ್ನಲ್ಲಿ ಮನ ಸೋತಿತು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
Labels:
೧೯೮೦,
SPB,
ಎಸ್. ಜಾನಕಿ,
ಚಿ. ಉದಯಶಂಕರ್,
ಮೂಗನ ಸೇಡು,
ಸತ್ಯಂ
Tuesday, November 9, 2010
ಇದೇ ನಾಡು ಇದೇ ಭಾಷೆ
ಚಿತ್ರ: ತಿರುಗು ಬಾಣ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯಕರು : ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಕರುನಾಡು ಸ್ವರ್ಗದ ಸೀಮೆ ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ ಕವಿವಾಣಿಯ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಚಾಮುಂಡಿ ರಕ್ಷೆಯು ನಮಗೆ ಗೊಮ್ಮಟೇಶ ಕಾವಲು ಇಲ್ಲಿ
ಶೃಂಗೇರಿ ಶಾರದೆ ಲೀಲೆ ರಸತುಂಗೆಯಾಗಿದೆ ಇಲ್ಲಿ
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ಈ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಳೇಳು ಜನ್ಮವೇ ಬರಲಿ ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೇ ಇರಲಿ ಸಿರಿಗನ್ನಡಕಾಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
Subscribe to:
Posts (Atom)