Showing posts with label ೧೯೭೬. Show all posts
Showing posts with label ೧೯೭೬. Show all posts

Wednesday, July 20, 2011

ವಸಂತ ಬರೆದನು ಒಲವಿನ ಓಲೆ



ಚಿತ್ರ: ಬೆಸುಗೆ
ಸಾಹಿತ್ಯ: ಗೀತಪ್ರಿಯ
ಸಂಗೀತ: ವಿಜಯಭಾಸ್ಕರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ವಾಣಿ ಜಯರಾಂ
ವರ್ಷ: ೧೯೭೬

ವಸಂತ ಬರೆದನು ಒಲವಿನ ಓಲೆ ಚಿಗುರಿದ ಎಲೆ ಎಲೆ ಮೇಲೆ
ಪಂಚಮದಲ್ಲಿ ಹಾಡಿತು ಕೋಗಿಲೆ ಪ್ರೇಮಿಗೆ ಓರ್ವಳೆ ನಲ್ಲೆ
ಪ್ರೇಮಿಗೆ ಓರ್ವಳೆ ನಲ್ಲೆ
ವಸಂತ ಬರೆದನು ಒಲವಿನ ಓಲೆ ಚಿಗುರಿದ ಎಲೆ ಎಲೆ ಮೇಲೆ
ಪಂಚಮದಲ್ಲಿ ಹಾಡಿತು ಕೋಗಿಲೆ ಪ್ರೇಮಿಗೆ ಓರ್ವಳೆ ನಲ್ಲೆ
ಪ್ರೇಮಿಗೆ ಓರ್ವಳೆ ನಲ್ಲೆ

ಹೂಗಳು ದುಂಬಿಯ ಚುಂಬನದಿಂದ ಪುಳಕಿತವಾಗಿಹ ಕಾಲ
ಮಧುಮಯ ಯೌವನ ಮೈ ಮನ ತುಂಬಿ ಮೆರೆದಿಹ ವಸಂತ ಕಾಲ
ತೀರದ ಆಸೆಯ ಆರದ ಉರಿಯ ವಿರಹಿಗೆ ತಂದಿಹ ಕಾಲ
ವಿರಹಿಗೆ ತಂದಿಹ ಕಾಲ
ವಸಂತ ಬರೆದನು ಒಲವಿನ ಓಲೆ ಚಿಗುರಿದ ಎಲೆ ಎಲೆ ಮೇಲೆ

ಬಯಕೆಯು ಅನಂತ ಮುಖದಲಿ ಹೊಮ್ಮಿ ಚಿಮ್ಮುವ ಆನಂದ ಕಾಲ
ಬಗೆಬಗೆ ಬಣ್ಣದ ಕಾಮನಬಿಲ್ಲು ಎಲ್ಲೆಡೆ ಕಾಣುವ ಕಾಲ
ಬಯಕೆಯು ಅನಂತ ಮುಖದಲಿ ಹೊಮ್ಮಿ ಚಿಮ್ಮುವ ಆನಂದ ಕಾಲ
ಬಗೆಬಗೆ ಬಣ್ಣದ ಕಾಮನಬಿಲ್ಲು ಎಲ್ಲೆಡೆ ಕಾಣುವ ಕಾಲ
ಬಳ್ಳಿಯು ಹೆಮ್ಮರ ಆಸರೆ ಕೋರಿ ತೋಳನು ಬಳಸುವ ಕಾಲ
ತೋಳನು ಬಳಸುವ ಕಾಲ

Tuesday, February 8, 2011

ಬೆಸುಗೆ ಬೆಸುಗೆ



ಚಿತ್ರ: ಬೆಸುಗೆ
ಸಾಹಿತ್ಯ: ಗೀತಪ್ರಿಯ
ಸಂಗೀತ: ವಿಜಯಭಾಸ್ಕರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ವಾಣಿ ಜಯರಾಂ
ವರ್ಷ: ೧೯೭೬

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ
ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ

ರಾಗದ ಜೊತೆಗೆ ತಾಳದ ಬೆಸುಗೆ
ರಾಗತಾಳಕೆ ಭಾವದ ಬೆಸುಗೆ
ರಾಗದ ಜೊತೆಗೆ ತಾಳದ ಬೆಸುಗೆ
ರಾಗತಾಳಕೆ ಭಾವದ ಬೆಸುಗೆ
ಭಾವದ ಜೊತೆಗೆ ಗೀತೆಯ ಬೆಸುಗೆ
ಗೀತೆಯ ಜೊತೆ ಸಂಗೀತದ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ

ಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ
ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ
ಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ
ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ
ಯೌವನದಲ್ಲಿ ಮೋಹದ ಬೆಸುಗೆ
ಮೈ ಮನದಲ್ಲಿ ಬಯಕೆಯ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ

ಎರಡು ಮನಸಿಗೆ ಒಲವಿನ ಬೆಸುಗೆ
ಎರಡು ಬಾಳಿನ ಬಂಧನ ಬೆಸುಗೆ
ಎರಡು ಮನಸಿಗೆ ಒಲವಿನ ಬೆಸುಗೆ
ಎರಡು ಬಾಳಿನ ಬಂಧನ ಬೆಸುಗೆ
ಮಧುರ ಮಿಲನಕೆ ಪ್ರೀತಿಯ ಬೆಸುಗೆ
ಜನುಮ ಜನುಮಕೂ ಆತ್ಮದ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ
ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜನುಮ ಜನುಮಕೂ ಆತ್ಮದ ಬೆಸುಗೆ

Tuesday, December 21, 2010

ಬಾನಿಗೊಂದು ಎಲ್ಲೆ ಎಲ್ಲಿದೆ



ಚಿತ್ರ: ಪ್ರೇಮದ ಕಾಣಿಕೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರ ಕುಮಾರ್
ಗಾಯಕರು: ಡಾ|| ರಾಜ್ ಕುಮಾರ್
ವರ್ಷ: ೧೯೭೬

ಬಾನಿಗೊಂದು ಎಲ್ಲೆ ಎಲ್ಲಿದೆ... ನಿನ್ನಾಸೆಗೆಲ್ಲಿ ಕೊನೆಯಿದೆ...
ಏಕೆ ಕನಸು ಕಾಣುವೆ... ನಿಧಾನಿಸು ನಿಧಾನಿಸು...
ಬಾನಿಗೊಂದು ಎಲ್ಲೆ ಎಲ್ಲಿದೆ... ನಿನ್ನಾಸೆಗೆಲ್ಲಿ ಕೊನೆಯಿದೆ...
ಏಕೆ ಕನಸು ಕಾಣುವೆ... ನಿಧಾನಿಸು ನಿಧಾನಿಸು...

ಆಸೆ ಎಂಬ ಬಿಸಿಲುಗುದುರೆ ಏಕೆ ಏರುವೆ
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ
ಅವನ ನಿಯಮ ಮೀರಿ ಇಲ್ಲಿ ಏನೂ ಸಾಗದು
ನಾವು ನೆನೆಸಿದಂತೆ ಬಾಳಲೇನು ನಡೆಯದು
ವಿಷಾದವಾಗಲೀ ವಿನೋದವಾಗಲೀ ಅದೇನೆ ಆಗಲೀ ಅವನೆ ಕಾರಣ
ಬಾನಿಗೊಂದು ಎಲ್ಲೆ ಎಲ್ಲಿದೆ...

ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು
ಹರುಷವೊಂದೆ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ
ದುರಾಸೆಯೇತಕೆ ನಿರಾಸೆಯೇತಕೆ ಅದೇನೇ ಬಂದರೂ ಅವನ ಕಾಣಿಕೆ

ಬಾನಿಗೊಂದು ಎಲ್ಲೆ ಎಲ್ಲಿದೆ... ನಿನ್ನಾಸೆಗೆಲ್ಲಿ ಕೊನೆಯಿದೆ...
ಏಕೆ ಕನಸು ಕಾಣುವೆ... ನಿಧಾನಿಸು ನಿಧಾನಿಸು...
ನಿಧಾನಿಸು ನಿಧಾನಿಸು...

Tuesday, November 9, 2010

ಕಂಗಳು ವಂದನೆ ಹೇಳಿದೆ

ಚಿತ್ರ: ಮುಗಿಯದ ಕಥೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು : ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೬

ಕಂಗಳು ವಂದನೆ ಹೇಳಿದೆ ಹೃದಯವು ತುಂಬಿ ಹಾಡಿದೆ
ಆಡದೆ ಉಳಿದಿಹ ಮಾತು ನೂರಿದೆ
ಕಂಗಳು ವಂದನೆ ಹೇಳಿದೆ ಹೃದಯವು ತುಂಬಿ ಹಾಡಿದೆ
ಆಡದೆ ಉಳಿದಿಹ ಮಾತು ನೂರಿವೆ
ಜೀವ ಜೀವ ಸೇರಲು ಮಾತು ಏತಕೆ
ಜೀವ ಜೀವ ಸೇರಲು ಮಾತು ಏತಕೆ ಒಲವಿನ ಕಾವ್ಯಕೆ ಇಂದೇ ಪೀಠಿಕೆ
ಕಂಗಳು ವಂದನೆ ಹೇಳಿದೆ ಹೃದಯವು ತುಂಬಿ ಹಾಡಿದೆ
ಆಡದೆ ಉಳಿದಿಹ ಮಾತು ನೂರಿವೆ

ಮುಡಿಯ ಜಾರಿದ ಹೂವಿದು ಮುಗಿಯದ ಕಥೆ ನನ್ನದು
ಈ ಹೂವನು ಮಣ್ಣಿಂದಲೇ ಕಾಪಾಡಿದ ಕೈಗಳಿವು
ಗಂಗೆಗೆ ಕೊಳೆ ಸೋಂಕದು ಪಾಪದ ಫಲ ಸಲ್ಲದು
ನಿನ್ನನು ಪಡೆದಂಥಹ ಈ ಭಾಗ್ಯವು ನನ್ನದು
ಪೂರ್ವದ ಪುಣ್ಯವೋ ಜನ್ಮದ ಬಂಧವೋ
ನಾನು ನೀನು ನೀನು ನಾನು ಒಂದೇ ಎಂದೆಂದಿಗೂ

ಕಂಗಳು ವಂದನೆ ಹೇಳಿದೆ ಹೃದಯವು ತುಂಬಿ ಹಾಡಿದೆ
ಆಡದೆ ಉಳಿದಿಹ ಮಾತು ನೂರಿವೆ

ಬಾಳಿನ ಗುಡಿ ಬೆಳಗಲಿ ಹರುಷದ ಹೊಳೆ ಹರಿಯಲಿ
ಪ್ರೇಮದ ಈ ನೌಕೆಯು ಸುಖ ತೀರವ ಸೇರಲಿ
ಹೇ ಹೇ ಅಹಾಹ ಅಹಾಹ ಅಹಾಹ ಅಹಾಹ
ಆಹಾ ಅಹಾಹ ಅಹಾಹ ಅಹಾಹ ಅಹಾಹ

ಬಯಕೆಯ ಕುಡಿ ಚಿಗುರಲಿ ಕನಸಿದು ಕೈಗೂಡಲಿ
ಎಂದಿಗೂ ಪತಿ ಸೇವೆಯ ಸೌಭಾಗ್ಯವು ಎನಗಿರಲಿ
ಸ್ವರವು ನೀ ಶೃತಿಯು ನಾ ದೊರೆಯು ನೀ ದಾಸಿ ನಾ
ನಾನು ನೀನು ನೀನು ನಾನು ಒಂದೇ ಎಂದೆಂದಿಗೂ

ಕಂಗಳು ವಂದನೆ ಹೇಳಿದೆ ಹೃದಯವು ತುಂಬಿ ಹಾಡಿದೆ
ಆಡದೆ ಉಳಿದಿಹ ಮಾತು ನೂರಿದೆ

Friday, October 29, 2010

ಯಾವ ಹೂವು ಯಾರ ಮುಡಿಗೋ



ಚಿತ್ರ: ಬೆಸುಗೆ
ಸಾಹಿತ್ಯ: ಶ್ಯಾಮಸುಂದರ್ ಕುಲಕರ್ಣಿ
ಸಂಗೀತ: ವಿಜಯಭಾಸ್ಕರ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೭೬

ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ
ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ
ಇಂಥ ಪ್ರೇಮದಾಟದಿ ಯಾರ ಹೃದಯ ಯಾರಿಗೋ
ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ

ಮುಖದಿ ಒಂದು ಭಾವನೆ ಕಣ್ಣಲೇನೋ ಕಾಮನೆ
ಮುಖದಿ ಒಂದು ಭಾವನೆ ಕಣ್ಣಲೇನೋ ಕಾಮನೆ
ಒಂದು ಮನದ ಯೋಚನೆ ಒಂದು ಮನಕೆ ಸೂಚನೆ
ಯಾರೂ ಅರಿಯಲಾರರು ಯಾರ ಪಾಲು ಯಾರಿಗೋ ಯಾರಿಗೋ...

ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ

ಒಂದು ಸುಮವು ಅರಳಿತು ದುಂಬಿಯನ್ನು ಒಲಿಸಿತು
ಒಂದು ಸುಮವು ಅರಳಿತು ದುಂಬಿಯನ್ನು ಒಲಿಸಿತು
ಮೋಹ ಪಾಶ ಎಸೆಯಿತು ಒಂದು ಪಾಠ ಕಲಿಸಿತು
ಇಂಥ ಪಾಠ ಕಲಿಸಲು ಗುರುವು ಯಾರು ಯಾರಿಗೋ ಯಾರಿಗೋ...

ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ

ಎಂದೋ ಹುಟ್ಟಿದಾಸೆಯೂ ಇಂದು ಮನವ ತಟ್ಟಿತು
ಎಂದೋ ಹುಟ್ಟಿದಾಸೆಯೂ ಇಂದು ಮನವ ತಟ್ಟಿತು
ಮನದ ಕದವ ತೆರೆಯಲು ಬೇರೆ ಗುರಿಯ ಮುಟ್ಟಿತು
ಯಾರು ಹೇಳಬಲ್ಲರು ಯಾರ ಪಯಣ ಎಲ್ಲಿಗೋ ಎಲ್ಲಿಗೋ...

ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ
ಇಂಥ ಪ್ರೇಮದಾಟದಿ ಯಾರ ಹೃದಯ ಯಾರಿಗೋ
ಯಾವ ಹೂವು ಯಾರ ಮುಡಿಗೋ
ಯಾರ ಒಲವು ಯಾರ ಕಡೆಗೋ

Tuesday, October 26, 2010

ಹೂವಂತೆ ಹೆಣ್ಣು ನಗುತಿರಬೇಕು



ಚಿತ್ರ: ಕಿಲಾಡಿ ಕಿಟ್ಟು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಮೋಹನ್ ಕುಮಾರ್
ಗಾಯಕರು: ಕೆ. ಜೆ. ಯೇಸುದಾಸ್
ವರ್ಷ: ೧೯೭೬

ಹೂವಂತೆ ಹೆಣ್ಣು ನಗುತಿರಬೇಕು
ಮನದಲ್ಲಿ ಶಾಂತಿ ತುಂಬಿರಬೇಕು
ಸಂತೋಷ ತರುವ ಸೌಭಾಗ್ಯ ಕೊಡುವ
ಮನವ ಗೆಲುವ ಒಲವ ಸುರಿವ ದೇವತೆಯಾಗಿ
ಹೂವಂತೆ ಹೆಣ್ಣು ನಗುತಿರಬೇಕು

ಬಂಗಾರವಲ್ಲ ಸಿಂಗಾರಕಲ್ಲ
ಕೊರಳಿನಲಿ ಮೆರೆದಿರಲು ಮಾಂಗಲ್ಯವಿಲ್ಲ
ಸುಮವ ಕೊಡುವ ಲತೆಗೆ ಹಸಿರೇ ಉಸಿರಾಗಿದೆ
ಗೃಹಿಣಿ ಇರುವ ಗುಡಿಗೆ ತಾಳಿ ಬೆಳಕಾಗಿದೆ
ಸಂತೋಷವೇನು ನೋವಾದರೇನು
ವಿರಸ ಮರೆತು ಸರಸದಿಂದ ಬಾಳಲು ಸೊಗಸು

ಹೂವಂತೆ ಹೆಣ್ಣು ನಗುತಿರಬೇಕು
ಮನದಲ್ಲಿ ಶಾಂತಿ ತುಂಬಿರಬೇಕು
ಸಂತೋಷ ತರುವ ಸೌಭಾಗ್ಯ ಕೊಡುವ
ಮನವ ಗೆಲುವ ಒಲವ ಸುರಿವ ದೇವತೆಯಾಗಿ
ಹೂವಂತೆ ಹೆಣ್ಣು ನಗುತಿರಬೇಕು

ಆಕಾಶ ರವಿಯ ಈ ಭೂಮಿ ಗಿರಿಯ
ಮರೆಯುವುದೆ ತೊರೆಯುವುದೆ ಸಂಬಂಧ ನೂಕಿ
ಒಲಿದ ಹೃದಯ ಬೆರೆತ ಜೀವ
ಬಿಡದೆಂದಿಗೂ ಮದುವೆ ತಂದ ಬೆಸುಗೆ ಕೆಡದು ಎಂದೆಂದಿಗೂ
ಈ ರೋಷ ತಂದ ಆವೇಶದಿಂದ
ಸಹನೆ ಮರೆವೆ ಕಡೆಗೆ ಕೆಡುವೆ ಯಾತನೆ ಪಡುವೆ

ಹೂವಂತೆ ಹೆಣ್ಣು ನಗುತಿರಬೇಕು
ಮನದಲ್ಲಿ ಶಾಂತಿ ತುಂಬಿರಬೇಕು
ಸಂತೋಷ ತರುವ ಸೌಭಾಗ್ಯ ಕೊಡುವ
ಮನವ ಗೆಲುವ ಒಲವ ಸುರಿವ ದೇವತೆಯಾಗಿ
ಹೂವಂತೆ ಹೆಣ್ಣು ನಗುತಿರಬೇಕು