Showing posts with label ೧೯೭೭. Show all posts
Showing posts with label ೧೯೭೭. Show all posts

Friday, June 3, 2011

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ

ಚಿತ್ರ: ಒಲವು ಗೆಲವು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಎಸ್. ಜಾನಕಿ
ವರ್ಷ: ೧೯೭೭

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ

ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಕಾಣುತ ನಿನ್ನ೦ದ ಕಾಣದ ಆನ೦ದ
ಹೊಸ ಹೊಸ ಬಯಕೆಯು ನಿನ್ನಿ೦ದ

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ

ತಾಳು ತಾಳು ನಲ್ಲ ನಿಲ್ಲು ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ

ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ

ಕಾಣದೆ ನಿನ್ನನ್ನು ಬಾಳೆನು ನಾನಿನ್ನು
ತಾಳೆನು ವಿರಹದ ನೋವನ್ನು

ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ

Wednesday, May 25, 2011

ರವಿವರ್ಮನ ಕುಂಚದ



ಚಿತ್ರ: ಸೊಸೆ ತಂದ ಸೌಭಾಗ್ಯ
ಸಾಹಿತ್ಯ : ಆರ್.ಎನ್.ಜಯಗೋಪಾಲ್
ಸಂಗೀತ : ಜಿ.ಕೆ.ವೆಂಕಟೇಶ್
ಗಾಯಕರು : ಪಿ.ಬಿ. ಶ್ರೀನಿವಾಸ್
ವರ್ಷ: ೧೯೭೭

ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ
ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ
ಕವಿಕಲ್ಪನೆ ಕಾಣುವಾ ಚೆಲುವಿನಾ ಜಾಲವೋ
ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ

ಉಯ್ಯಾಲೆಯಾ ಆಡಿ ನಲಿವಾ ರೂಪಸೀ
ಉಯ್ಯಾಲೆಯಾ ಆಡಿ ನಲಿವಾ ರೂಪಸೀ
ಸುರಲೋಕದಿಂದ ಇಳಿದು ಬಂದ ನಿಜ ಊರ್ವಶೀ
ನನ್ನೊಲವಿನ ಪ್ರೇಯಸಿ

ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ

ಹೂರಾಶಿಯ ನಡುವೆ ನಗುವ ಕೋಮಲೇ
ಹೂರಾಶಿಯ ನಡುವೆ ನಗುವ ಕೋಮಲೇ
ಕವಿ ಕಾಳಿದಾಸ ಕಾವ್ಯರಾಣಿ ಶಾಕುಂತಲೇ..
ಚಿರಯೌವ್ವನ ನಿನ್ನಲೇ

ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ
ಕವಿಕಲ್ಪನೆ ಕಾಣುವಾ ಚೆಲುವಿನಾ ಜಾಲವೋ
ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ

Thursday, February 3, 2011

ಮೊದಲನೆ ದಿನವೇ ಒಲಿದೆ



ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭

ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ

ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳ ಬಯಕೆಯೇ ನೀನಾದೆ ಬಾಳಿಗಾನಂದ ನೀ ತಂದೆ

ಪ್ರೇಮದ ಕಡಲಲಿ ಮುತ್ತಾದೆ ಪ್ರೇಮದ ಬದುಕಿಗೆ ಕಣ್ಣಾದೆ
ಪ್ರೇಮ ಪಲ್ಲವಿ ನೀನಾದೆ ಪ್ರೇಮದಾನಂದ ನೀ ತಂದೆ
ಪ್ರೇಮದಾನಂದ ನೀ ತಂದೆ

ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ

ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಪ್ರಾಣ ಪದಕವೇ ನೀನಾದೆ ನಾನು ನಿನ್ನಲ್ಲಿ ಒಂದಾದೆ

ಆಡುವ ಮಾತಿಗೆ ದನಿಯಾದೆ ಹಾಡುವ ಗೀತೆಗೆ ಶ್ರುತಿಯಾದೆ
ಜೀವ ಜೀವವೇ ನೀನಾದೆ ನಿನ್ನ ಮನದಲ್ಲಿ ನಾನಾದೆ
ನಿನ್ನ ಮನದಲ್ಲಿ ನಾನಾದೆ

ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ

ಆಕಾಶ ದೀಪವು ನೀನು



ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು ನಾ ನಲಿವೆನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
ಸಂಗಾತಿ ಆದರೆ ನೀನು ನಾ ಉಳಿವೆನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಹೂವಾದ ಆಸೆಯೆಲ್ಲ ಮುಳ್ಳಾಗಿ ಹೋಯಿತಲ್ಲ
ಜೀವ ನೋವ ತಾಳದಲ್ಲ ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು ನಾ ಸೋತೆನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು

Tuesday, January 4, 2011

ಹೂವೊಂದು ಬೇಕು ಬಳ್ಳಿಗೆ



ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಜಾನಕಿ
ವರ್ಷ:  ೧೯೭೭

ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಕಂದನಾ ಸಂತೋಷವೇ ತಾಯಿಯ ಸೌಭಾಗ್ಯಾವು
ಬಾಳಿನ ಆನಂದವು
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ

ಬಿಸಿಲಿಗೆ ನೆರಳಿನಂತೆ ಇರುಳಿಗೆ ಬೆಳಕಿನಂತೆ
ಬಾಳಿಗೆ ಕಂಗಳಂತೆ ಮಗುವಿನ ಪ್ರೀತಿಯಂತೆ
ಕಂದನ ತೊದಲು ನುಡಿ ಜೇನಿನ ಹನಿಗಳಂತೆ
ಕೋಪದಿ ಅಳುವಾಗ ಜೋಗುಳ ಹಾಡಿದಂತೆ
ಸರಸವೆ ದಿನಾ ಅನುದಿನ ಹೊಸತನ ಹೊಸತನ

ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ

ಒಣಗಿದ ರಂಬೆಯಲಿ ಹಸುರೆಲೆ ಮೂಡುವುದೇ
ಸೊರಗಿದ ಹರೈದಯದಲಿ ಸಂತಸ ಕಾಣುವುದೇ
ಮೂಡಿದ ಬಯಕೆಗಳು ಮುಗಿಯಲು ಕನಸಿನೊಳು
ಆಸೆಯು ಚಿಗುರುವುದೇ ಹರುಷವು ಉಳಿಯುವುದೇ
ಬಳಲಿದೆ ಮನ ಅನುದಿನ ಅನುಕ್ಷಣಾ ಅನುಕ್ಷಣಾ

ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಕಂದನಾ ಸಂತೋಷವೇ ತಾಯಿಯ ಸೌಭಾಗ್ಯಾವು
ಬಾಳಿನ ಆನಂದವು