Showing posts with label SPB. Show all posts
Showing posts with label SPB. Show all posts

Wednesday, July 20, 2011

ವಸಂತ ಬರೆದನು ಒಲವಿನ ಓಲೆ



ಚಿತ್ರ: ಬೆಸುಗೆ
ಸಾಹಿತ್ಯ: ಗೀತಪ್ರಿಯ
ಸಂಗೀತ: ವಿಜಯಭಾಸ್ಕರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ವಾಣಿ ಜಯರಾಂ
ವರ್ಷ: ೧೯೭೬

ವಸಂತ ಬರೆದನು ಒಲವಿನ ಓಲೆ ಚಿಗುರಿದ ಎಲೆ ಎಲೆ ಮೇಲೆ
ಪಂಚಮದಲ್ಲಿ ಹಾಡಿತು ಕೋಗಿಲೆ ಪ್ರೇಮಿಗೆ ಓರ್ವಳೆ ನಲ್ಲೆ
ಪ್ರೇಮಿಗೆ ಓರ್ವಳೆ ನಲ್ಲೆ
ವಸಂತ ಬರೆದನು ಒಲವಿನ ಓಲೆ ಚಿಗುರಿದ ಎಲೆ ಎಲೆ ಮೇಲೆ
ಪಂಚಮದಲ್ಲಿ ಹಾಡಿತು ಕೋಗಿಲೆ ಪ್ರೇಮಿಗೆ ಓರ್ವಳೆ ನಲ್ಲೆ
ಪ್ರೇಮಿಗೆ ಓರ್ವಳೆ ನಲ್ಲೆ

ಹೂಗಳು ದುಂಬಿಯ ಚುಂಬನದಿಂದ ಪುಳಕಿತವಾಗಿಹ ಕಾಲ
ಮಧುಮಯ ಯೌವನ ಮೈ ಮನ ತುಂಬಿ ಮೆರೆದಿಹ ವಸಂತ ಕಾಲ
ತೀರದ ಆಸೆಯ ಆರದ ಉರಿಯ ವಿರಹಿಗೆ ತಂದಿಹ ಕಾಲ
ವಿರಹಿಗೆ ತಂದಿಹ ಕಾಲ
ವಸಂತ ಬರೆದನು ಒಲವಿನ ಓಲೆ ಚಿಗುರಿದ ಎಲೆ ಎಲೆ ಮೇಲೆ

ಬಯಕೆಯು ಅನಂತ ಮುಖದಲಿ ಹೊಮ್ಮಿ ಚಿಮ್ಮುವ ಆನಂದ ಕಾಲ
ಬಗೆಬಗೆ ಬಣ್ಣದ ಕಾಮನಬಿಲ್ಲು ಎಲ್ಲೆಡೆ ಕಾಣುವ ಕಾಲ
ಬಯಕೆಯು ಅನಂತ ಮುಖದಲಿ ಹೊಮ್ಮಿ ಚಿಮ್ಮುವ ಆನಂದ ಕಾಲ
ಬಗೆಬಗೆ ಬಣ್ಣದ ಕಾಮನಬಿಲ್ಲು ಎಲ್ಲೆಡೆ ಕಾಣುವ ಕಾಲ
ಬಳ್ಳಿಯು ಹೆಮ್ಮರ ಆಸರೆ ಕೋರಿ ತೋಳನು ಬಳಸುವ ಕಾಲ
ತೋಳನು ಬಳಸುವ ಕಾಲ

ಪ್ರೇಮ ಪ್ರೀತಿ ನನ್ನುಸಿರು



ಚಿತ್ರ: ಸಿಂಗಾಪುರದಲ್ಲಿ ರಾಜಾ ಕುಳ್ಳ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಕೆ. ಜೆ. ಯೇಸುದಾಸ್
ವರ್ಷ: ೧೯೭೮

ವಾಟ್ ಈಸ್ ಲೈಫ್ ಲೈಫ್ ಈಸ್ ಎ ಸಾಂಗ್
ದೆನ್ ಸಿಂಗ್ ಇಟ್ ಐ ಸೇ
ಪ್ರೇಮ ಪ್ರೀತಿ ನನ್ನುಸಿರು ನ್ಯಾಯ ನೀತಿ ನನ್ನುಸಿರು
ಪ್ರೇಮ ಪ್ರೀತಿ ನನ್ನುಸಿರು ನ್ಯಾಯ ನೀತಿ ನನ್ನುಸಿರು
ಅನ್ಯಾಯ ಕಂಡಾಗ ಸಿಡಿಗುಂಡು ಸಿಡಿದಂತೆ
ಅಪರಾಧಿ ಎಲ್ಲೆಂದು ಹುಡುಕಾಡಿ ಹುಲಿಯಂತೆ
ಹೋರಾಡುವಾ ಬಾ ಓ ಗೆಳೆಯ
ಪ್ರೇಮ ಪ್ರೀತಿ ನನ್ನುಸಿರು ನ್ಯಾಯ ನೀತಿ ನನ್ನುಸಿರು

ಹೂವಂತೆ ಮೃದುವಾಗಬಲ್ಲೆ ಮುಳ್ಳಂತೆ ಮೊನಚಾಗಬಲ್ಲೆ
ಹಣ್ಣಂತೆ ಸಿಹಿಯಾಗಬಲ್ಲೆ ವಿಷದಂತೆ ಕಹಿಯಾಗಬಲ್ಲೆ
ಬಾಳೋದು ಹೇಗೆಂದು ನಾ ಬಲ್ಲೆ ಆಳೋದು ಹೇಗೆಂದು ಬಲ್ಲೆ
ಪ್ರೀತಿ ಪ್ರೀತಿಗೆ ರೋಷ ರೋಷಕೆ ನಮ್ಮ ರೀತಿಯೆನ್ನುವಾ

ವಾಟ್ ಈಸ್ ಲೈಫ್ ಲೈಫ್ ಈಸ್ ಎ ಡ್ಯೂಟಿ
ದೆನ್ ಪರ್ಫಾರ್ಮ್ ಇಟ್ ಐ ಸೇ
ಬಾಳು ಎಂದೂ ಹೂವಲ್ಲಾ ಬಾಳು ಎಂದೂ ಮುಳ್ಳಲ್ಲಾ
ಕಾಣೋದು ನಿಜವಲ್ಲ ಮಾತೆಲ್ಲಾ ಮುತ್ತಲ್ಲ
ಕಾಲಕ್ಕೆ ತಕ್ಕಂತೆ ಜಗದಲ್ಲಿ ಜನರೆಲ್ಲ
ಬಾಳೆಂಬುವಾ ಈ ಹಾದಿಯಲಿ
ಪ್ರೇಮ ಪ್ರೀತಿ ನನ್ನುಸಿರು ನ್ಯಾಯ ನೀತಿ ನನ್ನುಸಿರು

ಸವಿಯಾದ ಮಾತಾಡಬಲ್ಲೆ ಕವಿಯಾಗಿ ನಾ ಹಾಡಬಲ್ಲೆ
ಸಂತೋಷ ನಾ ಹಂಚಬಲ್ಲೆ ನೋವೆಲ್ಲಾ ನಾ ನುಂಗಬಲ್ಲೆ
ತಂಗಾಳಿ ನಾನಾಗಿ ಬರಬಲ್ಲೆ ಬಿರುಗಾಳಿ ನಾನಾಗಬಲ್ಲೆ
ಎಲ್ಲೆ ನೀನಿರು ಹೇಗೆ ನೀನಿರು ಎಂದೂ ಸ್ನೇಹದಿಂದಿರು

ಸೋ ವಾಟ್ ಈಸ್ ಲೈಫ್ ಲೈಫ್ ಈಸ್ ಎ ಗೇಮ್
ಆಹಾ ದೆನ್ ಪ್ಲೇ ಇಟ್ ಐ ಸೇ
ಹಗಲು ಇರುಳು ಇರುವಂತೆ ಸೋಲು ಗೆಲುವು ಜೊತೆಯಂತೆ
ಉಲ್ಲಾಸ ಸಂತೋಷ ಎಂದೆಂದೂ ಇರದೆಂದು
ನೋವೊಂದೇ ಸುಖವೊಂದೇ ಬಾಳಲ್ಲಿ ಬರದೆಂದು
ಈ ಸತ್ಯವಾ ನಾ ಅರಿತಿರುವೆ
ಪ್ರೇಮ ಪ್ರೀತಿ ನನ್ನುಸಿರು ನ್ಯಾಯ ನೀತಿ ನನ್ನುಸಿರು
ಎವೆರಿಬಡೀ…

Thursday, July 7, 2011

ಜಯಸಿಂಹ ಬಂದ ಜಯಸಿಂಹ



ಚಿತ್ರ: ಜಯಸಿಂಹ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ವಿಜಯಾನಂದ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೭

ತಣ್ಣನೆ ಗಾಳಿ ಕಾಡೆಲ್ಲ ಅಲೆದು
ಅರಗಿಳಿಗಳ ನೋಡಿ ಸವಿನುಡಿಯಲಿ ಹಾಡಿದೆ
ಸವಿನುಡಿಯಲಿ ಹಾಡಿದೆ
ಜಯಸಿಂಹ ಬಂದ ಜಯಸಿಂಹ
ಜಯಸಿಂಹ ಬಂದ ಜಯಸಿಂಹ

ಇನ್ನೇಕೆ ಭೀತಿ ಭಯವಿಲ್ಲ ನಿಮಗೆ
ವನಮೃಗಗಳು ಕ್ಷೇಮ ಗಿಡಮರಗಳು ಕ್ಷೇಮ
ಗಿಡಮರಗಳು ಕ್ಷೇಮ
ಜಯಸಿಂಹ ಬಂದ ಜಯಸಿಂಹ
ಜಯಸಿಂಹ ಬಂದ ಜಯಸಿಂಹ

ಗಿಳಿಗಳ ಗುಂಪು ಕಾಡೆಲ್ಲ ಅಲೆದು
ವನಮೃಗಗಳ ನೋಡಿ ಸವಿನುಡಿಯಲಿ ಹಾಡಿವೆ
ಸವಿನುಡಿಯಲಿ ಹಾಡಿವೆ
ಜಯಸಿಂಹ ಬಂದ ಜಯಸಿಂಹ
ಜಯಸಿಂಹ ಬಂದ ಜಯಸಿಂಹ

Monday, June 6, 2011

ಸಂತೋಷ ಅಹಾ ಅಹಾ ಸಂಗೀತ ಓಹೋ ಓಹೋ

ಚಿತ್ರ: ಎಡಕಲ್ಲು ಗುಡ್ಡದ ಮೇಲೆ
ಸಾಹಿತ್ಯ: ವಿಜಯನಾರಸಿಂಹ
ಸಂಗೀತ: ಎಂ. ರಂಗರಾವ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಪಿ. ಸುಶೀಲ
ವರ್ಷ: ೧೯೭೩

ಸಂತೋಷ ಅಹಾ ಅಹಾ ಸಂಗೀತ ಓಹೋ ಓಹೋ
ರಸಮಯ ಸಂತೋಷ, ಸುಖಮಯ ಸಂಗೀತ
ಹೊಸ ಹೊಸ ಭಾವತುಂಬಿ ನಸು ನಗೆ ಹೊಮ್ಮಿ ಚಿಮ್ಮಿ ಮೈ ತುಂಬಿದೆ

ಏಳು ಸ್ವರಗಳ ಭಾವಗೀತೆಯ ಸಂಗೀತ ಏಳು ಬಣ್ಣದ ಭೂಮಿ ರಮಣಿಗೆ ಸಂತೋಷ
ರಾಗ ಸಂಗೀತ ಗೆಲುವಿನ ಯೋಗ ಸಂತೋಷ
ರಾಗ ಸಂಗೀತ ಗೆಲುವಿನ ಯೋಗ ಸಂತೋಷ
ಹಾದಿಗೆಲ್ಲಾ ಹೂವು ಚೆಲ್ಲಿ
ಹಾದಿಗೆಲ್ಲಾ ಹೂವು ಚೆಲ್ಲಿ ಓಡಿ ಓಡಿ ಸಾಗುವಲ್ಲಿ ಹಾಡಿ ಹಾಡಿ ಮೂಡಿ ಬಂತು ಏನೋ ಮೋಡಿ

ಸಂತೋಷ ಅಹಾ ಅಹಾ ಸಂಗೀತ ಹೆಹೇ ಹೆಹೇ
ರಸಮಯ ಸಂತೋಷ ಸುಖಮಯ ಸಂಗೀತ
ಹೊಸ ಹೊಸ ಭಾವತುಂಬಿ ನಸು ನಗೆ ಹೊಮ್ಮಿ ಚಿಮ್ಮಿ ಮೈ ತುಂಬಿದೆ

ಜುಳು ಜುಳು ಹರಿಯುವ ನೀರಿನ ಅಲೆಗಳ ಸಂಗೀತ ಸುಯ್ ಸುಯ್ ಎನ್ನುತ ಬೀಸುವ ಗಾಳಿಗೆ ಸಂತೋಷ
ಸ್ವರ್ಗ ಸಂಗೀತ ನಿಸರ್ಗ ಸಂತೋಷ
ಸ್ವರ್ಗ ಸಂಗೀತ ನಿಸರ್ಗ ಸಂತೋಷ
ಸನ್ನೆ ಮಾಡಿ ಕೈಯಾ ಬೀಸಿ
ಸನ್ನೆ ಮಾಡಿ ಕೈಯಾಬೀಸಿ ಗುಟ್ಟು ಹೇಳಿ ಬೆಟ್ಟ ಸಾಲು ಹಾಡಿ ಹಾಡಿ ಮೂಡಿ ಬಂತು ಏನೋ ಮೋಡಿ.

ಕದ್ದು ಹಾಡುವ ಕೋಗಿಲೆ ಕೊರಳಿನ ಸಂಗೀತ ಮುದ್ದು ಜಿಂಕೆಗೆ ಜಿಗಿದು ನೆಗೆಯುವ ಸಂತೋಷ
ನಾದ ಸಂಗೀತ ಉನ್ಮಾದ ಸಂತೋಷ
ನಾದ ಸಂಗೀತ ಉನ್ಮಾದ ಸಂತೋಷ
ಉಬ್ಬಿ ಹಬ್ಬಿ ಬಾಚಿ ತಬ್ಬಿ
ಉಬ್ಬಿ ಹಬ್ಬಿ ಬಾಚಿ ತಬ್ಬಿ ನಾಚಿ ನಿಂತ ಹೂವು ಬಳ್ಳಿ ಹಾಡಿ ಹಾಡಿ ಮೂಡಿ ಬಂತು ಏನೋ ಮೋಡಿ

Friday, June 3, 2011

ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ

ಚಿತ್ರ: ಬೆಂಕಿಯ ಬಲೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೩

ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ

ಹರುಷ ಹರುಷ ಎಲ್ಲೆಲ್ಲೂ ಜೊತೆಗೆ ನೀನಿರೆ
ಸರಸ ಸರಸ ಬಾಳೆಲ್ಲ ಸನಿಹ ನೀನಿರೆ
ನಿನ್ನ ಮಾತಿಗೆ ನಿನ್ನ ಪ್ರೇಮಕೆ ನಾ ಸೋತು ಹೋದೆನು
ನಿನ್ನ ಸ್ನೇಹಕೆ ನಿನ್ನ ಪ್ರೀತಿಗೆ ಮಂಕಾಗಿ ಹೋದೆನು
ನನ್ನನ್ನೇ ಮರೆತೆನು

ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ

ಚೆಲುವ ನಿನ್ನ ನುಡಿ ಕೇಳಿ ಗಿಳಿಯು ನಾಚಿತು
ಚೆಲುವೆ ನಿನ್ನ ನಡೆ ನೋಡಿ ನವಿಲು ಕುಣಿಯಿತು
ನಗುನಗುತ ನೀ ಬರಲು ಹೊಸ ಆಸೆ ಚಿಮ್ಮಿತು
ನಿನ್ನ ಕಣ್ಣ ಮಿಂಚು ಮೂಡಲು ಮನವೇಕೋ ಬೆಚ್ಚಿತು
ಜಗವನ್ನೇ ಮರೆಸಿತು

ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ನಿನ್ನ ನುಡಿಯು ಹಾಡಂತೆ

Thursday, June 2, 2011

ಈ ಗುಲಾಬಿಯು ನಿನಗಾಗಿ

ಚಿತ್ರ: ಮುಳ್ಳಿನ ಗುಲಾಬಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨

ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ

ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ಆತುರ ತರುವ ವೇದನೆ ಏನು
ಆತುರ ತರುವ ವೇದನೆ ಏನು ಜೀವದ ಜೀವವು ಪ್ರಿಯತಮೆ ನೀನು

ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ

ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ಕಾಣದೆ ಹೋದರೆ ಅರೆಕ್ಷಣ ನಿನ್ನ
ಕಾಣದೆ ಹೋದರೆ ಅರೆಕ್ಷಣ ನಿನ್ನ ಮರುಕ್ಷಣ ಪ್ರಿಯತಮೆ ನನ್ನ ಸಾವು

ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ

ಎಂಥ ಮರುಳಯ್ಯಾ ಇದು ಎಂಥಾ ಮರುಳು

ಚಿತ್ರ: ಸ್ಪಂದನ
ಸಾಹಿತ್ಯ: ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ
ಸಂಗೀತ: ಅಶ್ವಥ್-ವೈದಿ
ಗಾಯಕರು: ಎಸ್.ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೭೮

ಎಂಥ ಮರುಳಯ್ಯಾ ಇದು ಎಂಥಾ ಮರುಳು
ಬೆಳಗಿನ ಹಿಮದಂತೆ ಹರಿವಾ ನೆರಳು
ಥಳಥಳ ಮಿನುಗಿ ಸೋಕಲು ಕರಗಿ
ಥಳಥಳ ಮಿನುಗಿ ಸೋಕಲು ಕರಗಿ
ಸರಿವುದು ಈ ಬಾಳಿನೆಲ್ಲಾ ತಿರುಳು ಸರಿವುದು ಈ ಬಾಳಿನೆಲ್ಲಾ ತಿರುಳು
ಎಂಥ ಮರುಳಯ್ಯಾ ಇದು ಎಂಥಾ ಮರುಳು

ಹರಿಯುವ ನೀರಿಗೆ ಯಾವ ಹೊಣೆ?
ಹಾರುವ ಹಕ್ಕಿಗೆ ಎಲ್ಲಿ ಮನೆ?
ಬಾಳಿನ ಕಡಲಿನ ತೆರೆಗಳ ಸೀಳಿ
ತಲುಪುವುದಾಚೆಯ ದಡದ ಕೊನೆ ತಲುಪುವುದಾಚೆಯ ದಡದ ಕೊನೆ
ಎಂಥ ಮರುಳಯ್ಯಾ ಇದು ಎಂಥಾ ಮರುಳು

ಸಂಜೆಯ ನೇಸರ ಬಣ್ಣದ ಲೀಲೆ
ನೀರಲಿ ಹಾರುತ ಬೆಳ್ಳಕ್ಕಿ ತೇಲೆ
ಕಡಲಿಗೆ ಸಾಲಾಗಿ ಮೂಡುತ ಮುಳುಗುತ
ಬೆನ್ನಟ್ಟಿ ಸಾಗುವ ತೆರೆಗಳ ಹಾಳೆ
ಸೃಷ್ಟಿಯೆ ಸುಂದರ ಸುಳ್ಳಿನ ಮಾಲೆ ಸೃಷ್ಟಿಯೆ ಸುಂದರ ಸುಳ್ಳಿನ ಮಾಲೆ

ಎಂಥ ಮರುಳಯ್ಯಾ ಇದು ಎಂಥಾ ಮರುಳು
ಬೆಳಗಿನ ಹಿಮದಂತೆ ಹರಿವಾ ನೆರಳು
ಥಳಥಳ ಮಿನುಗಿ ಸೋಕಲು ಕರಗಿ
ಥಳಥಳ ಮಿನುಗಿ ಸೋಕಲು ಕರಗಿ
ಸರಿವುದು ಈ ಬಾಳಿನೆಲ್ಲಾ ತಿರುಳು ಸರಿವುದು ಈ ಬಾಳಿನೆಲ್ಲಾ ತಿರುಳು
ಎಂಥ ಮರುಳಯ್ಯಾ ಇದು ಎಂಥಾ ಮರುಳು

ಜೊತೆಯಾಗಿ ಹಿತವಾಗಿ

ಚಿತ್ರ: ರಥಸಪ್ತಮಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೬

ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ...

ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ....

ಆ ಬಾನ ನೆರಳಲ್ಲಿ ಆ ಸೂರ್ಯನೆದುರಲ್ಲಿ
ಒಲವಿಂದ ನಾವೀಗ ಈ ಗಂಗೆ ದಡದಲ್ಲಿ
ಒಂದಾಗಿ ಸವಿಯಾದ ಮಾತೊಂದ ನುಡಿವ

ಈ ಸಂಜೆ ರಂಗಲ್ಲಿ ಈ ತಂಪು ಗಾಳೀಲಿ
ಜೊತೆಯಾಗಿ ನಾವೀಗ ಶಂಕರನ ಎದುರಲ್ಲಿ
ಇಂಪಾಗಿ ಹಿತವಾದ ಮಾತೊಂದ ನುಡಿವಾ

ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ

ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ

ಕನಸಲ್ಲಿ ಕಂಡಾಸೆ ಮನಸಲ್ಲಿ ಇರುವಾಸೆ
ಎಲ್ಲವೂ ಒಂದೇನೇ ನಿನ್ನನ್ನು ಪಡೆವಾಸೆ
ಇನ್ನೇನು ಬೇಕಿಲ್ಲ ನನ್ನಾಣೆ ನಲ್ಲ

ಹಗಲಲ್ಲಿ ಕಂಡಾಸೆ ಇರುಳಲ್ಲಿ ಬಂದಾಸೆ
ಎಲ್ಲಾವೂ ಒಂದೇನೆ ನಿನ್ನೊಡನೆ ಇರುವಾಸೆ
ಬೇರೇನು ನಾ ಕೇಳೆ ನನ್ನಾಣೆ ನಲ್ಲೆ

ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ನಿನ್ನ ಬಿಡಲಾರೆ ನಾನೆಂದಿಗೂ

ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ

Wednesday, June 1, 2011

ಮಾತು ಒಂದು ಮಾತು

ಚಿತ್ರ: ಮುನಿಯನ ಮಾದರಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಸುಲೋಚನ
ವರ್ಷ: ೧೯೮೧

ಮಾತು ಒಂದು ಮಾತು ಮಾತು ಒಂದು ಮಾತು
ಸ್ನೇಹದಿಂದ ಬಂದ ಮಾತು ನಿನ್ನ ಪ್ರೀತಿ ತಂದ ಮಾತು
ಹೃದಯದಿಂದ ಮೂಡಿ ಬಂತು ಮುತ್ತಿನಂಥ ಮಾತು

ಮಾತು ಕಿವಿ ಮಾತು ಮಾತು ಸವಿ ಮಾತು
ಸ್ನೇಹದಿಂದ ಬಂದ ಮಾತು ನಿನ್ನ ಪ್ರೀತಿ ತಂದ ಮಾತು
ಹೃದಯದಿಂದ ಮೂಡಿ ಬಂತು ಮುತ್ತಿನಂಥ ಮಾತು

ಮಾತು ಕಿವಿ ಮಾತು ಮಾತು ಸವಿ ಮಾತು

ಹೊನ್ನ ನುಡಿಗಳ ಈ ಮಾತು ನಿನ್ನ ಕೆಣಕುವ ಬಿಸಿ ಮಾತು
ಹೊನ್ನ ನುಡಿಗಳ ಈ ಮಾತು ನಿನ್ನ ಕೆಣಕುವ ಬಿಸಿ ಮಾತು
ಹಗಲಿನಲ್ಲೂ ನೂರು ಕನಸು ಕಾಣುವ ಸುಖದ ಮಾತು

ನಿನ್ನ ತಣಿಸುವ ಇನಿ ಮಾತು ಕಣ್ಣ ಕುಣಿಸುವ ಗಿಳಿ ಮಾತು
ಮದನನನ್ನು ಕಂಡ ರತಿಯು ಮೋಹಿಸಿ ಅಂದ ಮಾತು
ಆಡುವ ಆಸೆ ಬಂತು

ಆಹಾ ಮಾತು ಕಿವಿ ಮಾತು ಮಾತು ಸವಿ ಮಾತು
ಸ್ನೇಹದಿಂದ ಬಂದ ಮಾತು ನಿನ್ನ ಪ್ರೀತಿ ತಂದ ಮಾತು
ಹೃದಯದಿಂದ ಮೂಡಿ ಬಂತು ಮುತ್ತಿನಂಥ ಮಾತು
ಮಾತು ಕಿವಿ ಮಾತು ಮಾತು ಸವಿ ಮಾತು

ಪ್ರೇಮಿ ಆಡುವ ಮೃದು ಮಾತು ಜೇನು ತುಂಬಿದ ಸಿಹಿ ಮಾತು
ಪ್ರೇಮಿ ಆಡುವ ಮೃದು ಮಾತು ಜೇನು ತುಂಬಿದ ಸಿಹಿ ಮಾತು
ಒಲವಿನಿಂದ ಸೇರಿದಾಗ ಆಡುವ ಕಣ್ಣ ಮಾತು

ಎಂದು ಕೇಳದ ಹೊಸ ಮಾತು ಎಲ್ಲ ರಸಿಕರ ಮನೆ ಮಾತು
ಪ್ರಣಯ ಕಾವ್ಯ ಹರುಷದಿಂದ ಹಾಡಿದ ಕವಿಯ ಮಾತು
ಆಡುವ ಆಸೆ ಬಂತು

ಮಾತು ಕಿವಿ ಮಾತು ಮಾತು ಸವಿ ಮಾತು
ಸ್ನೇಹದಿಂದ ಬಂದ ಮಾತು ನಿನ್ನ ಪ್ರೀತಿ ತಂದ ಮಾತು
ಹೃದಯದಿಂದ ಮೂಡಿ ಬಂತು ಮುತ್ತಿನಂಥ ಮಾತು
ಮಾತು ಕಿವಿ ಮಾತು ಮಾತು ಸವಿ ಮಾತು

ಪ್ರೇಮದಲ್ಲಿ ಸ್ನೇಹದಲ್ಲಿ

ಚಿತ್ರ : ರಂಗನಾಯಕಿ
ಸಾಹಿತ್ಯ: ಎಂ. ಎನ್. ವ್ಯಾಸರಾವ್
ಸಂಗೀತ: ಎಂ. ರಂಗರಾವ್
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೧

ಹಾಯ್ ಬೇಬೀಸ್...
ಪ್ರೇಮದಲ್ಲಿ ಸ್ನೇಹದಲ್ಲಿ ಪ್ರೇಮದಲ್ಲಿ ಸ್ನೇಹದಲ್ಲಿ
ಕೋಪ ತಾಪ ರೋಷ ದ್ವೇಷ ಎಲ್ಲ ಯಾಕೆ
ಭಾಷೆ ಬಣ್ಣ ದೇಷ ವೇಷ ಎಲ್ಲ ಒಂದೇ.. ಒಂದೇ
ಸೋ ನಾವೆಲ್ಲ
ಕೂಡುವ ಹಾರುವ ಹಾಡುವ ಓಹ್ ಡಿಯರ್ಸ್
ಕೂಡುವ ಹಾರುವ ಹಾಡುವ ಓಹ್ ಡಿಯರ್ಸ್ ಮೈ ಡಿಯರ್ಸ್
ಪ್ರೇಮದಲ್ಲಿ ಸ್ನೇಹದಲ್ಲಿ
ಕೋಪ ತಾಪ ರೋಷ ದ್ವೇಷ ಎಲ್ಲ ಯಾಕೆ
ಭಾಷೆ ಬಣ್ಣ ದೇಷ ವೇಷ ಎಲ್ಲ ಒಂದೇ.. ಒಂದೇ

ನನ್ನ ಭಾಷೆ ಚೌ ಚೌ ಭಾಷೆ ನನ್ನ ಆಸೆ ಮಸಾಲ ದೋಸೆ
ನನ್ನ ಭಾಷೆ ಚೌ ಚೌ ಭಾಷೆ ನನ್ನ ಆಸೆ ಮಸಾಲ ದೋಸೆ
ದಯವ ತೋರಿ ದಾನ ಮಾಡಿ ಹತ್ತು ಪೈಸೆ
ದಯವ ತೋರಿ ದಾನ ಮಾಡಿ ಹತ್ತು ಪೈಸೆ
ಶಾಸ್ತ್ರೀಜಿ ರೀಟಾಜಿ ತಂಗಮ್ಮ ನಿಂಗಮ್ಮ
ಕೂಡುವ ಹಾರುವ ಹಾಡುವ ಓಹ್ ಡಿಯರ್ಸ್
ಕೂಡುವ ಹಾರುವ ಹಾಡುವ ಓಹ್ ಡಿಯರ್ಸ್ ಓಹ್ ಡಿಯರ್ಸ್ ಕ್ಯೂಂ ಭಾಯ್

ಪ್ರೇಮದಲ್ಲಿ ಸ್ನೇಹದಲ್ಲಿ
ಕೋಪ ತಾಪ ರೋಷ ದ್ವೇಷ ಎಲ್ಲ ಯಾಕೆ
ಭಾಷೆ ಬಣ್ಣ ದೇಷ ವೇಷ ಎಲ್ಲ ಒಂದೇ.. ಒಂದೇ

ನನ್ನ ಮಾತು ಕೇಸರಿ ಭಾತು ನನ್ನ ಕೋಪ ಖಾರ ಭಾತು
ನನ್ನ ಮಾತು ಕೇಸರಿ ಭಾತು ನನ್ನ ಕೋಪ ಖಾರ ಭಾತು
ದಿಲ್ ಖೋಲ್ಕೆ ನೀವು ಆಡಿ ಕನ್ನಡ ಮಾತು
ದಿಲ್ ಖೋಲ್ಕೆ ನೀವು ಆಡಿ ಕನ್ನಡ ಮಾತು ಕನ್ನಡ ಮಾತು
ಅಬ್ದುಲ್ಲ ಸೈದುಲ್ಲ ಆಂಟೋನಿ ಅವಧಾನಿ
ಕೂಡುವ ಹಾರುವ ಹಾಡುವ ಓಹ್ ಡಿಯರ್ಸ್
ಕೂಡುವ ಹಾರುವ ಹಾಡುವ ಓಹ್ ಡಿಯರ್ಸ್ ಮೈ ಡಿಯರ್ಸ್
ವಾಟ್ ಡಾರ್ಲಿಂಗ್ ವಾಟ್ ಡು ಯು ಸೇ

ಪ್ರೇಮದಲ್ಲಿ ಸ್ನೇಹದಲ್ಲಿ
ಕೋಪ ತಾಪ ರೋಷ ದ್ವೇಷ ಎಲ್ಲ ಯಾಕೆ
ಭಾಷೆ ಬಣ್ಣ ದೇಷ ವೇಷ ಎಲ್ಲ ಒಂದೇ.. ಒಂದೇ

ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ

ಚಿತ್ರ: ಮರೆಯಲಾಗದ ಕಥೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ರಮಣಿ
ವರ್ಷ: ೧೯೮೨

ಬರೆಯುವೆ ನಿನಗಾಗಿ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ

ಹುಣ್ಣಿಮೆಯ ದೀಪದಲ್ಲಿ ತಣ್ಣನೆಯ ರಾತ್ರಿಯಲ್ಲಿ
ಸಂಪಿಗೆಯ ತಂಪಿನಲ್ಲಿ ಇಂಪಾದ ರಾಗದಲಿ
ನಾ ಬರೆಯುವೆ
ಅರಗಿಣಿಯ ಭಾಷೆಯಲ್ಲಿ ಕೋಗಿಲೆಯ ರಾಗದಲ್ಲಿ
ಹಂಸನಡೆ ತಾಳದಲ್ಲಿ ಮುತ್ತಂಥ ಮಾತಿನಲಿ
ಹೊಸ ಕವಿತೆಯ.. ಓ ಗೆಳತಿ...

ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ

ಹೂ ಬನದಿ ಆಯ್ದು ತಂದ ಮೊಗ್ಗಾದ ಮಲ್ಲಿಗೆಯಿಂದ
ಸವಿಜೇನ ಹನಿಹನಿಯಿಂದ ಪ್ರಣಯದ ಆನಂದದಿಂದ
ನಾ ಬರೆಯುವೆ
ನನ್ನಂತರಾಳದಿಂದ ಪುಟಿದೇಳೋ ಭಾವದಿಂದ
ಬಯಕೆಗಳ ಭಾರದಿಂದ ಕಣ್ಣುಗಳ ಮಿಂಚಿನಿಂದ
ಹೊಸ ಕವಿತೆಯ.. ಓ ಗೆಳತಿ...

ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ

ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು

ಚಿತ್ರ: ಸಾಹಸ ಸಿಂಹ
ಸಾಹಿತ್ಯ: ಅರ್.ಎನ್.ಜಯಗೋಪಾಲ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨

ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು

ಕನಸಲ್ಲೂ ನಿನ್ನ ರೂಪ ಈ ಮನದಲ್ಲಿ ತರಲು ತಾಪ
ಕಣ್ಣಲ್ಲಿ ಮುಚ್ಚಿ ನಿನ್ನಾ ನಾ ಕರೆದೊಯ್ವ ಆಸೆ ಚಿನ್ನಾ
ನಗುವೆಂಬ ಬಲೆಯ ಬೀಸಿ ನಾ ನುಡಿಯಲ್ಲಿ ಜೇನಾ ಸೂಸಿ
ಸೆರೆಹಿಡಿವೆ ಬಿಡದೆ ನಿನ್ನಾ....

ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು

ಮಿಂಚಂತೆ ಸುಳಿದು ನೀನು ಮರೆಯಾಗಿ ಹೋದರೇನು
ಸುಳಿವನ್ನು ತಿಳಿಯಬಲ್ಲ ಹೊಸ ಮೋಡಿ ಬಲ್ಲೆ ನಾನು
ಬಾಳಲ್ಲಿ ಬಿಡಿಸದಂಥ ಎಂದೆಂದೂ ಮುರಿಯದಂಥ
ಬಂಧನದೇ ಹಿಡಿವೆ ನಿನ್ನ...

ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು

ಎಂಥಾ ಸೌಂದರ್ಯ ನೋಡು

ಚಿತ್ರ: ಮಾತು ತಪ್ಪದ ಮಗ
ಸಾಹಿತ್ಯ: ಆರ್.ಎನ್.ಜಯಗೋಪಾಲ್
ಸಂಗೀತ: ಇಳಯರಾಜ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೭೮

ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು
ಗಂಧದ ಗೂಡಿದು ಕಲೆಗಳ ತೌರಿದು ಕನ್ನಡ ನಾಡಿದು ಚಿನ್ನದಾ ಮಣ್ಣಿದು
ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು

ಹರಿಯುವ ನೀರು ಹಸುರಿನ ಪೈರು ಎಲ್ಲೆಡೆ ಆ ತಾಯ ಸಿರಿಯೇ
ಹೂಗಳ ಕೆಂಪು ಮರಗಳ ಸಂಪು ಎಲ್ಲೂ ಆ ತಾಯಿ ನಗೆಯೇ
ಹರಿಯುವ ನೀರು ಹಸುರಿನ ಪೈರು ಎಲ್ಲೆಡೆ ಆ ತಾಯ ಸಿರಿಯೇ
ಹೂಗಳ ಕೆಂಪು ಮರಗಳ ಸಂಪು ಎಲ್ಲೂ ಆ ತಾಯಿ ನಗೆಯೇ
ಭಾರತ ಮಾತೆಯಾ ಈ ತನುಜಾತೆಯ ಚೆಲುವನು ನೋಡುತ ನಲಿಯುವೆ ಮೆರೆಯುವೆ ನಾ..

ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು

ಎಲ್ಲೇ ಇರಲಿ ಹೇಗೇ ಇರಲಿ ನಮ್ಮೂರ ಸವಿನೋಟ ಚಂದ
ಸಾವಿರ ಭಾಷೆಯ ಕಲಿತರೂ ಮನಕೆ ಕನ್ನಡ ನುಡಿಮುತ್ತೆ ಅಂದ
ಪೂರ್ವದ ಪುಣ್ಯವೊ ಪಡೆದಿಹ ಭಾಗ್ಯವೊ ಹುಟ್ಟಿದೆ ಪಾವನ ಕನ್ನಡ ಮಣ್ಣಲಿ ನಾ...

ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು
ಗಂಧದ ಗೂಡಿದು ಕಲೆಗಳ ತೌರಿದು ಕನ್ನಡ ನಾಡಿದು ಚಿನ್ನದಾ ಮಣ್ಣಿದು
ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು

ಹೂವಾ ನೋಡು ಎಂಥ ಅಂದವಾಗಿದೆ

ಚಿತ್ರ : ಬಾಡದ ಹೂ
ಸಂಗೀತ : ಅಶ್ವತ್ಥ್-ವೈದಿ
ಸಾಹಿತ್ಯ : ಚಿ.ಉದಯಶಂಕರ್
ಗಾಯನ : ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ ಮತ್ತು ಕೋರಸ್
ವರ್ಷ: ೧೯೮೨

ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ ಹೂವಾ ನೋಡು ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ

ಬಳ್ಳೀ ನೋಡು ಬಳ್ಳಿ ನೋಡು ಎಂಥ ಅಂದವಾಗಿದೆ
ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು

ಆಗಸವೆಲ್ಲೋ ಭೂಮಿಯು ಎಲ್ಲೋ ಯಾರು ಬಿಡಿಸದ ಅನುಬಂಧ
ಯಾರು ಬಿಡಿಸದ ಅನುಬಂಧ

ಕಡಲಿನ ನೀರನು ಹೀರಿ ಮೇಲೆ ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ

ಹನಿಹನಿ ನೀರು ಸೇರಿ ಸೇರಿ ಹನಿಹನಿ ನೀರು ಸೇರಿ ಸೇರಿ
ನದಿಯಾಗಿ...
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ

ಹೂವಾ ನೋಡು ಎಂಥ ಅಂದವಾಗಿದೆ ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ

ಮಾನವ ಜೀವಿ ಒಂಟಿಯಲ್ಲ ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ

ಸಾವಿರ ವರುಷ ಬಾಳುವುದಿಲ್ಲ ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ

ಸರಸದಿ ಸೇರಿ ಬಾಳಿದಾಗ ಸರಸದಿ ಸೇರಿ ಬಾಳಿದಾಗ
ಆನಂದಾ...
ಆನಂದ ನಮಗಾಗ ಈ ಮಾತು ಸುಳ್ಳಲ್ಲ

ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು ಎಂಥ ಸ್ನೇಹವು ಆಹಾ ಎಂಥ ಪ್ರೇಮವು

ಕನ್ನಡ ನಾಡಿನ ರಸಿಕರ ಮನವ

ಚಿತ್ರ : ರಂಗನಾಯಕಿ
ಸಾಹಿತ್ಯ: ಕಣಗಾಲ್ ಪ್ರಭಾಕರ ಶಾಸ್ತ್ರಿ
ಸಂಗೀತ: ಎಂ.ರಂಗರಾವ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೧

ಕನ್ನಡ ನಾಡಿನ ರಸಿಕರ ಮನವ ಸೂರೆಗೊಂಡ ನಾಯಕಿ
ರಂಗನಾಯಕಿ ರಂಗನಾಯಕಿ

ಕಲೆಯ ರಸ ಗಂಗೆಯಲ್ಲಿ ನಿಂದ ಸೌಂದರ್ಯವಲ್ಲಿ
ಕಲೆಯ ರಸ ಗಂಗೆಯಲ್ಲಿ ನಿಂದ ಸೌಂದರ್ಯವಲ್ಲಿ
ಮಾತಂಗಿ ತಂಗಿ ಲಲಿತ ಲತಾಂಗಿ
ತಂಗಿ ಲಲಿತ ಲತಾಂಗಿ

ಕನ್ನಡ ನಾಡಿನ ರಸಿಕರ ಮನವ ಸೂರೆಗೊಂಡ ನಾಯಕಿ
ರಂಗನಾಯಕಿ ರಂಗನಾಯಕಿ

ಬಣ್ಣದ ಬದುಕಿಂದ
ಬಣ್ಣದ ಬದುಕಿಂದ ಚಿನ್ನದ ಬಾಳಿಗೆ ಮನ್ನಣೆ ಪಡೆದ
ಭಾಗ್ಯವತಿ ಸೌಭಾಗ್ಯವತಿ

ಕನ್ನಡ ನಾಡಿನ ರಸಿಕರ ಮನವ ಸೂರೆಗೊಂಡ ನಾಯಕಿ
ರಂಗನಾಯಕಿ ರಂಗನಾಯಕಿ

ನಿನ್ನ ಹೃದಯ ಹಸಿರಾಗಿರಲಿ
ನಿನ್ನ ಹೃದಯ ಹಸಿರಾಗಿರಲಿ ನಿನ್ನ ನೆನಪು ಸವಿಯಾಗಿರಲಿ
ಹೋಗಿ ಬಾ ಹೋಗಿ ಬಾ ಹೋಗಿ ಬಾ
ದೀರ್ಘಸುಮಂಗಲಿ ದೀರ್ಘಸುಮಂಗಲಿ
ದೀರ್ಘಸುಮಂಗಲಿ ದೀರ್ಘಸುಮಂಗಲಿ

Wednesday, March 9, 2011

ಭಾಗ್ಯಾದ ಲಕ್ಷ್ಮೀ ಬಾರಮ್ಮ



ಚಿತ್ರ: ಭಾಗ್ಯದ ಲಕ್ಷ್ಮೀ ಬಾರಮ್ಮ
ರಚನೆ: ಚಿ. ಉದಯಶಂಕರ್
ಸಂಗೀತ: ಸಿಂಗೀತಂ ಶ್ರೀನಿವಾಸರಾವ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೬

ಭಾಗ್ಯಾದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮೀ ಬಾರಮ್ಮ

ಉಸಿರನ್ನಾಡಲು ಪ್ರಾಣವು ಬೇಕು ಪ್ರಾಣವು ನಿಲ್ಲಲು ಊಟವು ಬೇಕು
ಊಟವ ಮಾಡಲು ಹಣವಿರಬೇಕು ಎಲ್ಲಕು ಲಕ್ಷ್ಮಿಯ ದಯೆ ಇರಬೇಕು
ಭಾಗ್ಯಾದ ಲಕ್ಷ್ಮೀ ಬಾರಮ್ಮ

ಜೇಬಿನ ತುಂಬ ಇದ್ದರೆ ನೋಟು ಸುಲಭದಿ ಸಿಗುವುದು ಕಾಲೇಜು ಸೀಟು
ದೊರಕದ ವೋಟಿನ ಬೇಟೆಗೆ ಕೂಡ ಇರಲೇಬೇಕು ಬಗೆ ಬಗೆ ನೋಟು
ಭಾಗ್ಯಾದ ಲಕ್ಷ್ಮೀ ಬಾರಮ್ಮ

ಕಾಸು ಬಿಚ್ಚಿದರೆ ಶೀಘ್ರ ದರುಶನ ಕಾಸಿಲ್ಲದಿರೆ ಧರ್ಮ ದರುಶನ
ಈ ಕಲಿಯುಗದಲಿ ಎಲ್ಲೇ ಹೋಗಲಿ ದೇವರು ಕೂಡ ನೋಡನು ಬಡವನ
ಭಾಗ್ಯಾದ ಲಕ್ಷ್ಮೀ ಬಾರಮ್ಮ

ದೊರಕದ ಲೈಸೆನ್ಸ್ ದೊರಕುವುದುಂಟು ದೊರಕದ ವಸ್ತುವು ದೊರಕುವುದುಂಟು
ಟೇಬಲ್ ಕೆಳಗಡೆ ನೋಟು ತಳ್ಳಿದರೆ ಎಲ್ಲ ಕೆಲಸಕು ಸ್ಯಾಂಕ್ಷನ್ ಉಂಟು
ಭಾಗ್ಯಾದ ಲಕ್ಷ್ಮೀ ಬಾರಮ್ಮ

ವೈದ್ಯರ ಆಸೆ ಬಡವನಿಗೇಕೆ ರೋಗವು ಬಂದರೆ ಅಳುವುದು ಏಕೆ
ಧರ್ಮಾಸ್ಪತ್ರೆಗೆ ಹೋದರು ರೋಗಿಯು ಲಂಚ ಲಂಚ ಎಂದರೆ ಮಂಚ
ಭಾಗ್ಯಾದ ಲಕ್ಷ್ಮೀ ಬಾರಮ್ಮ

ಕೆಲಸ ದೊರಕಲು ಹಣ ಕೊಡಬೇಕು ತಾಳಿಯ ಕಟ್ಟಲು ಕೂಲಿಯು ಬೇಕು
ಸಾಧು ಸನ್ಯಾಸಿಗಳಾದರೆ ಏನು ಪಾದ ಪೂಜೆಗೂ ನೋಟಿರಬೇಕು
ಭಾಗ್ಯಾದ ಲಕ್ಷ್ಮೀ ಬಾರಮ್ಮ

ಗೌರವ ಧನವಿದು ಎಂದರೂ ಒಂದೇ ಮೆಚ್ಚಿಗೆಗಾಗಿ ಎಂದರೂ ಒಂದೇ
ವಿಶ್ವಾಸಕೆ ಕಿರುಗಾಣಿಕೆ ಎಂದರೂ ಎಲ್ಲಾ ಒಂದೇ ಲಂಚದ ಕಂತೆ
ಭಾಗ್ಯಾದ ಲಕ್ಷ್ಮೀ ಬಾರಮ್ಮ

ಝಣ ಝಣ ಎಂದು ಸದ್ದನು ಮಾಡು ಹೆಣವೂ ಬಾಯ್ ಬಾಯ್ ಬಿಡುವುದು ನೋಡು
ಹಣವಿದ್ದರೆ ನೀ ದಿನಕರನಂತೆ ಇಲ್ಲದಿದ್ದರೆ ಶ್ವಾನದಂತೆ
ಭಾಗ್ಯಾದ ಲಕ್ಷ್ಮೀ ಬಾರಮ್ಮ

ಇಲ್ಲದ ಬುಧ್ದಿಯ ಇದೆ ಎನ್ನುವರು ಇಲ್ಲದ ಅಂದವ ಇದೆ ಎನ್ನುವರು
ಒಲ್ಲದೆ ಹೋದರೂ ಓಲೈಸುವರು ಬಲ್ಲಿದನಾದರೆ ಪಾದ ಹಿಡಿವರು
ಭಾಗ್ಯಾದ ಲಕ್ಷ್ಮೀ ಬಾರಮ್ಮ ನಮ್ಮಮ್ಮ ನೀ
ಸೌಭಾಗ್ಯಾದ ಲಕ್ಷ್ಮೀ ಬಾರಮ್ಮ

ನನ್ನೆದೆ ವೀಣೆಯು ಮಿಡಿಯುವುದು



ಚಿತ್ರ: ಕಥಾನಾಯಕ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಎಂ. ರಂಗರಾವ್
ಗಾಯಕರು : ಎಸ್.ಪಿ.ಬಾಲಸುಬ್ರಹ್ಮಣ್ಯಂ,. ವಾಣಿ ಜಯರಾಂ
ವರ್ಷ: ೧೯೮೬

ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು.....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು...
ನಿನ್ನ ನೋಡಿದಾಗ..ಕಣ್ಣು ಕೂಡಿದಾಗ ಅನುರಾಗ ಮೂಡಿದಾಗ....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು

ಎಂದೂ ಕಾಣೆ ನಂಬು ಜಾಣೆ ನಿನ್ನಾ ಸೇರಲು
ನೂರೂ ಮಾತು ನೂರೂ ಕವಿತೆ ಕಣ್ಣೇ ಆಡಲು
ನಿನ್ನಾ ನೋಟ ನಿನ್ನಾ ಆಟ ನನ್ನಾ ಸೆಳೆಯಲು
ಒಂಟಿ ಬಾಳು ಸಾಕು ಎಂದು ಮನಸೂ ಹೇಳಲು
ಆಸೆ ಕೆಣಕಿದಾಗ ತೋಳಿಂದಾ ಬಳಸಿದಾಗ
ಆಸೆ ಕೆಣಕಿದಾಗ ತೋಳಿಂದಾ ಬಳಸಿದಾಗ
ಮಿಂಚಿನ ಬಳ್ಳಿಯು ಒಡಲಲಿ ಓಡುತ ನಾಚಿ ನೋಡಿದಾಗ

ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು...
ನಿನ್ನ ನೋಡಿದಾಗ..ಕಣ್ಣು ಕೂಡಿದಾಗ ಅನುರಾಗ ಮೂಡಿದಾಗ....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು

ಮೇಲೆ ಸೂರ್ಯ ಜಾರಿ ಜಾರಿ ಬಿಸಿಲು ಕರಗಲು
ಸಂಜೆ ಬಂದು ರಂಗು ತಂದು ಮೇಲೆ ಎರಚಲು
ತಂಪು ಗಾಳಿ ಬೀಸಿ ಬಳ್ಳಿ ಬಳುಕಿ ಆಡಲು
ಹಾಗೇ ಹೀಗೆ ಆಡಿ ಹೂವು ಕಂಪು ಚೆಲ್ಲಲೂ
ದುಂಬಿ ನೋಡಿದಾಗ ಸಂಗೀತ ಹಾಡಿದಾಗ
ದುಂಬಿ ನೋಡಿದಾಗ ಸಂಗೀತ ಹಾಡಿದಾಗ
ಮನಸಿನ ಹಕ್ಕಿಯು ಕನಸನು ಕಾಣುತ ದೂರ ಹಾರಿದಾಗ

ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು
ಹೊಸ ಭಾವಗಳು ಕುಣಿದಾಡುವುದು...
ನಿನ್ನ ನೋಡಿದಾಗ..ಕಣ್ಣು ಕೂಡಿದಾಗ ಅನುರಾಗ ಮೂಡಿದಾಗ....
ನನ್ನೆದೆ ವೀಣೆಯು ಮಿಡಿಯುವುದು ಹೊಸರಾಗದಲಿ ಹೊರಹೊಮ್ಮುವುದು

Tuesday, February 8, 2011

ಬೆಸುಗೆ ಬೆಸುಗೆ



ಚಿತ್ರ: ಬೆಸುಗೆ
ಸಾಹಿತ್ಯ: ಗೀತಪ್ರಿಯ
ಸಂಗೀತ: ವಿಜಯಭಾಸ್ಕರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ವಾಣಿ ಜಯರಾಂ
ವರ್ಷ: ೧೯೭೬

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ
ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ

ರಾಗದ ಜೊತೆಗೆ ತಾಳದ ಬೆಸುಗೆ
ರಾಗತಾಳಕೆ ಭಾವದ ಬೆಸುಗೆ
ರಾಗದ ಜೊತೆಗೆ ತಾಳದ ಬೆಸುಗೆ
ರಾಗತಾಳಕೆ ಭಾವದ ಬೆಸುಗೆ
ಭಾವದ ಜೊತೆಗೆ ಗೀತೆಯ ಬೆಸುಗೆ
ಗೀತೆಯ ಜೊತೆ ಸಂಗೀತದ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ

ಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ
ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ
ಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ
ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ
ಯೌವನದಲ್ಲಿ ಮೋಹದ ಬೆಸುಗೆ
ಮೈ ಮನದಲ್ಲಿ ಬಯಕೆಯ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ

ಎರಡು ಮನಸಿಗೆ ಒಲವಿನ ಬೆಸುಗೆ
ಎರಡು ಬಾಳಿನ ಬಂಧನ ಬೆಸುಗೆ
ಎರಡು ಮನಸಿಗೆ ಒಲವಿನ ಬೆಸುಗೆ
ಎರಡು ಬಾಳಿನ ಬಂಧನ ಬೆಸುಗೆ
ಮಧುರ ಮಿಲನಕೆ ಪ್ರೀತಿಯ ಬೆಸುಗೆ
ಜನುಮ ಜನುಮಕೂ ಆತ್ಮದ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜೀವನವೆಲ್ಲ ಸುಂದರ ಬೆಸುಗೆ
ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ
ಜನುಮ ಜನುಮಕೂ ಆತ್ಮದ ಬೆಸುಗೆ

Thursday, February 3, 2011

ಮೊದಲನೆ ದಿನವೇ ಒಲಿದೆ



ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭

ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ

ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳ ಬಯಕೆಯೇ ನೀನಾದೆ ಬಾಳಿಗಾನಂದ ನೀ ತಂದೆ

ಪ್ರೇಮದ ಕಡಲಲಿ ಮುತ್ತಾದೆ ಪ್ರೇಮದ ಬದುಕಿಗೆ ಕಣ್ಣಾದೆ
ಪ್ರೇಮ ಪಲ್ಲವಿ ನೀನಾದೆ ಪ್ರೇಮದಾನಂದ ನೀ ತಂದೆ
ಪ್ರೇಮದಾನಂದ ನೀ ತಂದೆ

ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ

ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಪ್ರಾಣ ಪದಕವೇ ನೀನಾದೆ ನಾನು ನಿನ್ನಲ್ಲಿ ಒಂದಾದೆ

ಆಡುವ ಮಾತಿಗೆ ದನಿಯಾದೆ ಹಾಡುವ ಗೀತೆಗೆ ಶ್ರುತಿಯಾದೆ
ಜೀವ ಜೀವವೇ ನೀನಾದೆ ನಿನ್ನ ಮನದಲ್ಲಿ ನಾನಾದೆ
ನಿನ್ನ ಮನದಲ್ಲಿ ನಾನಾದೆ

ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ

ಆಕಾಶ ದೀಪವು ನೀನು



ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು ನಾ ನಲಿವೆನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
ಸಂಗಾತಿ ಆದರೆ ನೀನು ನಾ ಉಳಿವೆನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು

ಹೂವಾದ ಆಸೆಯೆಲ್ಲ ಮುಳ್ಳಾಗಿ ಹೋಯಿತಲ್ಲ
ಜೀವ ನೋವ ತಾಳದಲ್ಲ ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು ನಾ ಸೋತೆನು

ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು