Thursday, July 7, 2011

ಹಾಯಾಗಿ ಕುಳಿತಿರು ನೀನು



ಚಿತ್ರ: ಹಾಲು ಜೇನು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಡಾ|| ರಾಜ್ ಕುಮಾರ್, ಸರಿತಾ
ವರ್ಷ: ೧೯೮೨

ಲೇ ಲೇ..
ಏನ್ರೀ..
ಒಂದ್ ಮಾತು
ಹೇಳಿ
ಹೇಳಿದ್ರೆ ಕೇಳ್ತೀಯಾ?
ನಿಮ್ ಮಾತ್ ಯಾವತ್ ಕೇಳಿಲ್ಲ?
ಹಾಗಾದ್ರೆ, ಆ ಪಾತ್ರೆ ಅಲ್ಲಿಡು
ಹೂಂ.. ಇಟ್ಟೆ
ಬಾ ಇಲ್ಲಿ
ಹೂಂ?
ಬಾರೆ ಅಂದ್ರೆ
ಹೂಂ..
ಕೂತ್ಕೋ ಇಲ್ಲಿ ಮಂಚದ್ ಮೇಲೆ
ಏನ್ರೀ ಇದು ಇಷ್ಟೊತ್‍ನಲ್ಲಿ
ಅಯ್ಯಯ್ಯೋ! ಅದಕ್ಕಲ್ವೇ..

ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ
ಮಹಾರಾಣಿಯ ಹಾಗೆ
ಮನೆ ಕೆಲ್ಸ ಯಾರ್ರೀ ಮಾಡೋದು ನಿಮ್ಮಾವನ?
ಆಯಾಸ ಪಡದಿರು ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ
ನೀನೇ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ
ಮಹಾರಾಣಿಯ ಹಾಗೆ

ಅಯ್ಯಯ್ಯೋ ಏನ್ರೀ ಇದು ಅವತಾರ?
ಗಂಡ್ಸಾಗ್ ಹುಟ್ಟಿ ನೀವ್ ಅಡುಗೆ ಮಾಡ್ತೀರ?

ಭೀಮಸೇನ ನಳಮಹರಾಜರು ಗಂಡಸರಲ್ಲವೇ
ಭೀಮಸೇನ ನಳಮಹರಾಜರು ಗಂಡಸರಲ್ಲವೇ
ನನ್ನ ಹಾಗೆ ಮೀಸೆ ಹೊತ್ತ ಮಹನೀಯರಲ್ಲವೇ ಮಹನೀಯರಲ್ಲವೇ
ನೆನ್ನೆಯ ತನಕ ನೀನೆ ದುಡಿದೆ ಈ ಸಂಸಾರಕೆ ಜೀವ ತೇದೆ
ಈ ದಿನವಾದರೂ ನಿನ್ನ ಸೇವೆಯ ಮಾಡುವೆ ಚಿನ್ನ
ಪಬಬಂ ಪಬಬಂ ಪಬಬಂ

ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ
ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ
ನೀನೇ ಆಗ ಮೆಚ್ಚಿಕೊಳ್ಳುವೆ
ತರರಂ ತರರಂ ತರರಂ

ಯಾ..ಯಾಕ್ರೀ ಕಣ್ಣೀರು
ಇದು ಕಣ್ಣೀರಲ್ವೇ ಪನ್ನೀರು ಪನ್ನೀರು
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ?
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ?
ಮನಸನು ಅರಿತು ನಡೆಯುತಲಿರಲು ಚಿಂತೆಯ ಮಾತೇಕೆ
ನೀ ನಗುತಲಿರಲು ನಮ್ಮೀ ಮನೆಗೆ ಆ ಸ್ವರ್ಗವೇ ಜಾರಿದಂತೆ
ಹೆಂಡತಿ ಸೇವಕಿ ಅಲ್ಲ ಗಂಡನು ದೇವರು ಅಲ್ಲ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ
ನೀನೇ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ

ಜಯಸಿಂಹ ಬಂದ ಜಯಸಿಂಹ



ಚಿತ್ರ: ಜಯಸಿಂಹ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ವಿಜಯಾನಂದ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೭

ತಣ್ಣನೆ ಗಾಳಿ ಕಾಡೆಲ್ಲ ಅಲೆದು
ಅರಗಿಳಿಗಳ ನೋಡಿ ಸವಿನುಡಿಯಲಿ ಹಾಡಿದೆ
ಸವಿನುಡಿಯಲಿ ಹಾಡಿದೆ
ಜಯಸಿಂಹ ಬಂದ ಜಯಸಿಂಹ
ಜಯಸಿಂಹ ಬಂದ ಜಯಸಿಂಹ

ಇನ್ನೇಕೆ ಭೀತಿ ಭಯವಿಲ್ಲ ನಿಮಗೆ
ವನಮೃಗಗಳು ಕ್ಷೇಮ ಗಿಡಮರಗಳು ಕ್ಷೇಮ
ಗಿಡಮರಗಳು ಕ್ಷೇಮ
ಜಯಸಿಂಹ ಬಂದ ಜಯಸಿಂಹ
ಜಯಸಿಂಹ ಬಂದ ಜಯಸಿಂಹ

ಗಿಳಿಗಳ ಗುಂಪು ಕಾಡೆಲ್ಲ ಅಲೆದು
ವನಮೃಗಗಳ ನೋಡಿ ಸವಿನುಡಿಯಲಿ ಹಾಡಿವೆ
ಸವಿನುಡಿಯಲಿ ಹಾಡಿವೆ
ಜಯಸಿಂಹ ಬಂದ ಜಯಸಿಂಹ
ಜಯಸಿಂಹ ಬಂದ ಜಯಸಿಂಹ

Monday, June 6, 2011

ಅರಳಿದೆ ತನು ಮನ ನೋಡುತ ನಿನ್ನ



ಚಿತ್ರ: ಅಪೂರ್ವ ಸಂಗಮ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಡಾ|| ರಾಜ್ ಕುಮಾರ್, ಎಸ್.ಜಾನಕಿ
ವರ್ಷ: ೧೯೮೪

ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ

ಚಲಿಸುವ ತಂಗಾಳಿಯು ಚೆಲುವೆ ನಿನ್ನ ನೋಡಿ
ನಲಿಯುತ ಓಡಿದೆ ಮುಂಗುರುಳ ಹಿಡಿದು ಆಡಿ
ಅರಳಿದ ಗುಲಾಬಿಯು ಸೋಕಿ ಪರಿಮಳ ಹೀರಿ
ಸರಸಕೆ ಬಂದಿದೆ ಈ ನಿನ್ನ ಅಂದ ನೋಡಿ
ಸುಖ ತರುತಿದೆ ಹಿತ ಕರೆದಿದೆ ಚಲುವ
ಅರಳಿದೆ ತನು ಮನ ನೋಡುತ ನಿನ್ನ

ಎದೆಯಲಿ ಹೊಮ್ಮಿ ಹೊಮ್ಮಿ ನೂರು ಬಯಕೆ ಈಗ
ಕೆಣಕಲು ಸೋತೆನು ನನ್ನಿನಿಯ ನಿನ್ನ ನೋಡಿ
ಪ್ರಣಯದ ಸಂಗೀತದ ಇಂಪು ಕಿವಿಯ ತುಂಬಿ
ಕನಸನು ಕಂಡೆನು ಸಂಗಾತಿಯೇ ನಿನ್ನ ಸೇರಿ
ಇನ್ನು ಬಿಡುವೆನೇ ನನ್ನೇ ಕೊಡುವೆ ನಾ ಚೆಲುವೆ

ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ

ಕನ್ನಡ ನಾಡಿನ ವೀರರಮಣಿಯ



ಚಿತ್ರ: ನಾಗರಹಾವು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ವಿಜಯಭಾಸ್ಕರ್
ಗಾಯಕರು: ಪಿ. ಬಿ. ಶ್ರೀನಿವಾಸ್
ವರ್ಷ: ೧೯೭೨

ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಮದಿಸಿದ ಕರಿಯ ಮದವಡಗಿಸಿದ ಮದಕರಿ ನಾಯಕರಾಳಿದ ಕೋಟೆ
ಪುಣ್ಯ ಭೂಮಿಯು ಈ ಬೀಡು ಸಿದ್ದರು ಹರಸಿದ ಸಿರಿನಾಡು
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ವೀರಮದಕರಿ ಆಳುತಲಿರಲು ಹೈದಾರಾಲಿಯು ಯುಧ್ಧಕೆ ಬರಲು
ಕೋಟೆ ಜನಗಳ ರಕ್ಷಿಸುತಿರಲು ಸತತ ಧಾಳಿಯು ವ್ಯರ್ಥವಾಗಲು
ವ್ಯೆರಿ ಚಿಂತೆಯಲಿ ಬಸವಳಿದ ದಾರಿಗಾಣದೆ ಮಂಕಾದ
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ಗೂಢಚಾರರು ಅಲೆದು ಬಂದರು ಹೈದಾರಾಲಿಗೆ ವಿಷಯ ತಂದರು
ಚಿತ್ರದುರ್ಗದ ಕೋಟೆಯಲಿ ವಾಯುವ್ಯ ದಿಕ್ಕಿನೆಡೆ ನೋಡು ಎಂದರು
ಕಳ್ಳಗಂಡಿಯ ತೋರಿದರು ಲಗ್ಗೆ ಹತ್ತಲು ಹೇಳಿದರು
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ಸುತ್ತ ಮುತ್ತಲು ಕಪ್ಪು ಕತ್ತಲೆಯು ಮುತ್ತಿರಲು
ವೀರ ಕಾವಲುಗಾರ ಭೋಜನಕ್ಕೆ ನೆಡೆದಿರಲು
ಸಿಹಿನೀರ ತರಲೆಂದು ಅವನ ಸತಿ ಬಂದಿರಲು ಕಳ್ಳಗಂಡಿಯ ಹಿಂದೆ ಪಿಸುಮಾತ ಕೇಳಿದಳು
ಆಲಿಸಿದಳು ಇಣುಕಿದಳು ವೈರಿ ಪಡೆ ಕೋಟೆಯತ್ತ ಬರುವುದನ್ನು ಕಂಡಳು
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಪುಣ್ಯ ಭೂಮಿಯು ಈ ಬೀಡು ಸಿದ್ದರು ಹರಸಿಯ ಸಿರಿನಾಡು
ಅಮರಳಾದಳು ಓಬವ್ವ ಅಮರಳಾದಳು ಓಬವ್ವ

ಚಂದಿರ ತಂದ ಹುಣ್ಣಿಮೆ ರಾತ್ರಿ



ಚಿತ್ರ: ಚಲಿಸುವ ಮೋಡಗಳು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ : ರಾಜನ್-ನಾಗೇಂದ್ರ
ಗಾಯಕರು : ಡಾ|| ರಾಜ್ ಕುಮಾರ್, ಎಸ್. ಜಾನಕಿ
ವರ್ಷ: ೧೯೮೨

ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು ಈ ನನ್ನ ನಲ್ಲನ ತೂಗೆಂದಿತು
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಈ‌ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಈ‌ ನನ್ನ ಮಂಚವು ಮಾತಾಡಿತು ನಿನ್ನನ್ನು ಆಚೆಗೆ ನೂಕೆಂದಿತು

ಏನು ತೊಂದರೆ ಅಲ್ಲಿ ಬಂದರೆ ಸೇವೆ ಮಾಡುವೆನು
ಹೂವನು ಹಾಸಿ ನಿಮ್ಮ ಮಲಗಿಸಿ ಲಾಲಿ ಹಾಡುವೆನು
ಮೈಯ್ಯ ಮುಟ್ಟದೆ ಕೈಯ ಎಳೆಯದೆ ದೂರ ನಿಲ್ಲುವೆಯ
ನನ್ನ ನೆಮ್ಮದಿ ಹಾಳು ಮಾಡದೆ ಹೊರಗೆ ಹೋಗುವೆಯ
ಭಾರಿ ಬ್ರಹ್ಮಚಾರಿ ನೀನು ಬಲ್ಲೆ ಎಲ್ಲ ಹೆಣ್ಣೇ ನಿನ್ನ ಆರೋಗ್ಯ ಸರಿಯಾಗಿಲ್ಲ
ಪ್ರೀತಿಯೆಂದರೆ ಗೊತ್ತೆ ಇಲ್ಲ ನನಗೆ ಪ್ರೀತಿಯೆ ಬೇಕಾಗಿಲ್ಲ
ಬೇಡವೆಂದರು ನಾ ಬಿಡುವುದಿಲ್ಲ

ಅಯ್ಯೊ .. ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಈ‌ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು ಈ ನನ್ನ ನಲ್ಲನ ತೂಗೆಂದಿತು

ಅತ್ತೆ ಕಂಡರೆ ಮಾವ ಬಂದರೆ ಮಾನ ಹೋಗುವುದು
ಅಪ್ಪನು ರೇಗಿ ಗದರಿಸಿದಾಗ ಎನು ಹೇಳುವುದು
ಏಕೆ ಹೆದರುವೆ ಕದವ ಹಾಕುವೆ ಏನೂ ಕೇಳಿಸದು
ಸದ್ದು ಮಾಡದೆ ದೀಪ ಆರಿಸು ಏನೂ ಕಾಣಿಸದು
ಅಯ್ಯೋ ನಿನ್ನಾ ನಿನ್ನ ಹೆಣ್ಣು ಆಂದೋರಿಗೆ ಬುದ್ಧಿ ಇಲ್ಲ ಏನೇ ಹೇಳು ನಿನ್ನ ಬಿಟ್ಟು ಬಾಳೋದಿಲ್ಲ
ಕೋಪ ಬಂದರೆ ಸುಮ್ಮನಿರಲ್ಲ ಆಗಲೇ ನೀನು ಚೆನ್ನ ನಲ್ಲ
ಅಯ್ಯೋ ಎನು ಮಾಡಲಿ ಆ ದೇವರೆ ಬಲ್ಲ

ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಈ‌ ನನ್ನ ಮಂಚವು ಎನೆಂದಿತು ನಿನ್ನನ್ನು ಆಚೆಗೆ ನೂಕೆಂದಿತು